ಕೆಎಸ್ಆರ್ ಟಿಸಿ ಬಸ್ ಡಿಕ್ಕಿ, ಯುವತಿ ಸಾವು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಯುವತಿ (22) ಮೃತಪಟ್ಟಿರುವ ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ...
(ಸಾಂದರ್ಭಿಕ  ಚಿತ್ರ)
(ಸಾಂದರ್ಭಿಕ ಚಿತ್ರ)
Updated on

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಯುವತಿ (22) ಮೃತಪಟ್ಟಿರುವ ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಮೃತಳ ಗುರುತು ಪತ್ತೆಯಾಗಿಲ್ಲ. ತುಮಕೂರು ರಸ್ತೆಯ ನಾಗಸಂದ್ರ ಮೆಟ್ರೊ ರೈಲು ನಿಲ್ದಾಣದ ಸಮೀಪ ಬೆಳಗ್ಗೆ 7.30ರ ವೇಳೆಗೆ ಅಪಘಾತ ಸಂಭವಿಸಿದೆ. ಬಳ್ಳಾರಿಯಿಂದ ಬೆಂಗಳೂರು ಮಾರ್ಗವಾಗಿ ಬರುತ್ತಿದ್ದ ಬಸ್, ರಸ್ತೆ ದಾಟುತ್ತಿದ್ದ ಯುವತಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಪೀಣ್ಯ ಸಂಚಾರ ಠಾಣಾ ಪೊಲೀಸರು ದೂರು ಪ್ರಕರಣ ದಾಖಲಿಸಿಕೊಂಡು, ಬಸ್ ಚಾಲಕ ಮಹಂತೇಗೌಡ (42) ಅವರನ್ನು ಬಂಧಿಸಿದ್ದಾರೆ.

ಮೃತ ದೇಹವನ್ನು ಸಪ್ತಗಿರಿ ಆಸ್ಪತ್ರೆಯಲ್ಲಿ ಇಡಲಾಗಿದ್ದು, ವಾರಸುದಾರರು ಪೀಣ್ಯ ಸಂಚಾರ ಪೊಲೀಸರನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com