ಮಂಡ್ಯ: ಶ್ರೀರಂಗಪಟ್ಟಣ ತಾಲೂಕು ಉಪ ವಿಭಾಗಾಧಿಕಾರಿ ಮೇಲೆ ಮರಳು ದಂಧೆ ಕೋರರಿಂದ ಸೋಮವಾರ ಹಲ್ಲೆ ಯತ್ನ ನಡೆದಿದೆ.
ಪಾಂಡವಪುರ ತಾಲ್ಲೂಕಿನ ಚಿಕ್ಕಬ್ಯಾಡರಹಳ್ಳಿ ಬಳಿ ಉಪ ವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮೇಲೆ ಮರಳು ದಂಧೆಕೋರರು ಹಲ್ಲೆ ನಡೆಸಿದ್ದಾರೆ. ಇಂದು ಬೆಳಗ್ಗೆ ಸುಮಾರು 4 ಗಂಟೆ ವೇಳೆಗೆ ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿ, ಹಲವು ಲಾರಿಗಳನ್ನು ಜಪ್ತಿ ಮಾಡಲಾಗಿತ್ತು. ನಂತರ ಅಲ್ಲಿಂದ ಹೊರಟ ನಾಗಾರಾಜು ಅವರನ್ನು ಕಾರಿನಲ್ಲಿ ಹಾಗೂ ಬೈಕ್ ನಲ್ಲಿ ಹಿಂಬಾಲಿಸಿದ ಕೆಲ ಜನ ಕಿರಂಗೂರಿನ ಬಳಿ ಹಿಡಿದು ಎಳೆದಾಡಿದ್ದಾರೆ. ನಂತರ ಅವರನ್ನು ನಾಗರಾಜು ಅವರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಈ ಸಂಬಂಧ ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮ ಮರಳು ದಂಧೆ ನಡೆಯುತ್ತಿರುವ ಬಗ್ಗೆ ಲಿಖಿತ ದೂರು ನೀಡಿದ ಹಿನ್ನೆಲೆಯಲ್ಲಿ ಇಂದು ದಾಳಿ ನಡೆಸಲಾಗಿತ್ತು. ಈ ಹಿಂದೆ ಪೊಲೀಸರ ಮೇಲೆ ಮರಳು ದಂಧೆ ಕೋರರು ಹಲ್ಲೆ ನಡೆಸಿದ್ದರು.
Advertisement