ಚಾಲನಾ ಪರವಾನಗಿ ಮಂಜೂರಾತಿಯಲ್ಲಿ ಅಕ್ರಮ: ಪ್ರಶ್ನಿಸಿದ ಆಪ್ ಕಾರ್ಯಕರ್ತರ ಮೇಲೆ ಹಲ್ಲೆ

ಆರ್ ಟಿಒ ಇಲಾಖೆಯ ಅಧಿಕಾರಿಯೊಬ್ಬರು ಅಕ್ರಮವಾಗಿ ಚಲಾನಾ ಪರವಾನಗಿ ನೀಡುತ್ತಿರುವುದನ್ನು ಪ್ರಶ್ನಿಸಿದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ನಾಯಕರ ಮೇಲೆ ಹಲ್ಲೆ ನಡೆದಿದೆ.
ಚಲನಾ ಪರವಾನಗಿ ಮಂಜೂರಾತಿಯಲ್ಲಿ ಅಕ್ರಮ ವಿರೋಧಿಸಿ ಆಮ್ ಆದ್ಮಿ ಕಾರ್ಯಕರ್ತರಿಂದ ಪ್ರತಿಭಟನೆ
ಚಲನಾ ಪರವಾನಗಿ ಮಂಜೂರಾತಿಯಲ್ಲಿ ಅಕ್ರಮ ವಿರೋಧಿಸಿ ಆಮ್ ಆದ್ಮಿ ಕಾರ್ಯಕರ್ತರಿಂದ ಪ್ರತಿಭಟನೆ
Updated on

ಮಂಡ್ಯ: ಆರ್ ಟಿಒ ಇಲಾಖೆಯ ಅಧಿಕಾರಿಯೊಬ್ಬರು ಅಕ್ರಮವಾಗಿ ಚಾಲನಾ ಪರವಾನಗಿ ನೀಡುತ್ತಿರುವುದನ್ನು ಪ್ರಶ್ನಿಸಿದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ನಾಯಕರ ಮೇಲೆ ಹಲ್ಲೆ ನಡೆದಿದೆ.
ಕರ್ನಾಟಕ ಆಮ್ ಆದ್ಮಿ ಪಕ್ಷದ ಫೇಸ್ ಬುಕ್ ಪೇಜ್ ನಲ್ಲಿ ಅಪ್ ಡೇಟ್ ಆಗಿರುವ ಮಾಹಿತಿ ಪ್ರಕಾರ, ಮಂಡ್ಯದ ಆರ್.ಟಿ.ಒ ಇನ್ಸ್ ಪೆಕ್ಟರ್ ವ್ಯಕ್ತಿಯೊಬ್ಬರಿಗೆ ಅಕ್ರಮವಾಗಿ ವಾಹನ ಚಾಲನಾ ಪರವಾನಗಿ ನೀಡುತ್ತಿರುವುದನ್ನು ವಿರೋಧಿಸಿದ ಆಮ್ ಆದ್ಮಿ ನಾಯಕರಾದ ರವಿಕೃಷ್ಣ ರೆಡ್ಡಿ ಹಾಗೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಮಂಡ್ಯದ ನಿಧಿ ಡ್ರೈವಿಂಗ್ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಡಬಲ್ ಕ್ಲಚ್ ಮತ್ತು ಬ್ರೇಕ್ ಹೊಂದಿರುವ ವಾಹನದಲ್ಲಿ ಡಿಎಲ್(ಚಾಲನಾ ಪರವಾನಗಿ) ಅರ್ಜಿದಾರನ ಚಾಲನಾ ಪರೀಕ್ಷೆ ನಡೆಸಿದ್ದು ಅಲ್ಲದೇ , ಡ್ರೈವಿಂಗ್ ತರಬೇತಿ ನೀಡುವವರು ಪಕ್ಕದಲ್ಲೇ ಕುಳಿತ್ತಿದ್ದರು. ಈ ಅಕ್ರಮ ತಿಳಿದಿದ್ದರೂ ಸಹ ಪರೀಕ್ಷೆಯನ್ನು ಅಂಗೀಕರಿಸಿದ ಆರ್ ಟಿ ಒ ಇನ್ಸ್ ಪೆಕ್ಟರ್ ಷಗುರಲ್ಲಾ ಶರೀಫ್ ಪರೀಕ್ಷೆಯನ್ನು ಅಂಗೀಕರಿಸಿ ಅಕ್ರಮವಾಗಿ ಲೈಸೆನ್ಸ್ ಮಂಜೂರು ಮಾಡಲು ಮುಂದಾಗಿದ್ದರು. ಈ ಬಗ್ಗೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರಶ್ನಿಸಿದಾಗ ಆರ್ ಟಿ ಒ ಇನ್ಸ್ ಪೆಕ್ಟರ್ ಶರೀಫ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಆದರೆ ಮಧ್ಯಪ್ರವೇಶಿಸಿದ ಡ್ರೈವಿಂಗ್ ಶಾಲೆಯ ಮಾಲಿಕ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲು ತನ್ನ ಸಿಬ್ಬಂದಿಗೆ ಸೂಚಿಸಿದ ಎಂದು ಆಪ್ ನಾಯಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com