ಮಂಡ್ಯ: ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಂಗಳವಾರ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕಾಳಿಂಗನಹಳ್ಳಿಯಲ್ಲಿ ನಡೆದಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದ್ದು, ರಾಮಕೃಷ್ಣ(63), ನಾಗಮ್ಮ(55) ಹಾಗೂ ಪುತ್ರ ಆನಂದ್(30) ಮೃತಪಟ್ಟ ದುರ್ದೈವಿಗಳು.
ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳೆದ ಕೆಲವು ದಿನಗಳಿಂದ ಉಂಟಾಗಿದ್ದ ಕುಟುಂಬ ಕಲಹದಿಂದ ಬೇಸತ್ತು ತಂದೆ, ತಾಯಿ ಹಾಗೂ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Advertisement