ಬೆಂಗಳೂರು: ಕೃಷ್ಣರಾಜಪುರ ಮೊಬೈಲ್ ಟವರ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸುತ್ತಮುತ್ತಲಿನ ಪ್ರದೇಶವೆಲ್ಲ ದಟ್ಟ ಹೊಗೆ ಆವರಿಸಿಕೊಂಡ ಕಾರಣ ಸಾರ್ವಜನಿಕರು ಮತ್ತು ವಾಹನ ಸವಾರರು ಆತಂಕಕ್ಕೀಡಾದರೂ, ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಆಗಬಹುದಾದ ಹೆಚ್ಚಿನ ಅನಾಹುತ ತಪ್ಪಿಸಿದರು.
ದೇವಸಂದ್ರ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಕೆನರಾ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ನ ಕಟ್ಟಡಗಳ ಮೇಲೆ ಅಳವಡಿಸಿರುವ ಮೊಬೈಲ್ ಟವರ್ ನಲ್ಲಿ ಗುರುವಾರ ಮಧ್ಯಾಹ್ನ 1.30 ಸುಮಾರಿನಲ್ಲಿ ಹೊಗೆ ಕಾಣಿಸಿಕೊಂಡು ಬೆಂಕಿಯಾಗಿ ಪರಿವರ್ತನೆಗೊಂಡಿದೆ. ತಕ್ಷಣ ಅಗ್ನಿ ಶಾಮಕ ದಳಕ್ಕೆ ಸ್ಥಳೀಯರು ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಸಮೀಪವೇ ಇದ್ದ ಮಹದೇವಪುರ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
Advertisement