ಹುಣಸೇಕಟ್ಟೆ(ದಾವಣಗೆರೆ): ದಾವಣಗೆರೆಯ ಹುಣಸೇಕಟ್ಟೆ ಬಳಿ ಬುಲೆರೋ ಪಲ್ಟಿ ಹೊಡೆದ ಪರಿಣಾಮ ಐವರು ದುರ್ಮರಣ ಹೊಂದಿದ್ದಾರೆ.
ದಾವಣಗೆರೆಯ ಹುಣಸೇಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬುಲೆರೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮ ಬುಲೆರೋದಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ಜಗಳೂರು ತಾಲೂಕಿನ ಬಿಳಿಚೋಡ್ ನಿವಾಸಿಗಳೆಂದು ತಿಳಿದುಬಂದಿದೆ. ದಾವಣಗೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Advertisement