ಸಿದ್ದಗಂಗಾ ಮಠದಲ್ಲಿ ವ್ಯಕ್ತಿಯ ಬರ್ಬರ ಕೊಲೆ

ಸಿದ್ದಗಂಗಾ ಮಠ
ಸಿದ್ದಗಂಗಾ ಮಠ

ತುಮಕೂರು: ಜ್ಞಾನ ದೇಗುಲ ಎಂದೇ ಖ್ಯಾತಿ ಪಡೆದಿರುವ ಸಿದ್ದಗಂಗಾ ಮಠದ ಆವರಣದಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ನಡೆದಿದೆ.

ಸಿದ್ದಗಂಗಾ ಮಠದಲ್ಲಿ ಜಾತ್ರೆ ನಡೆಯುತ್ತಿದ್ದು, ಜಾತ್ರೆ ನಿಮಿತ್ತ ಹಲವು ಜಿಲ್ಲೆಗಳಿಂದ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು. ಅದೇ ರೀತಿ ಚಾಮರಾಜನಗರ ಮೂಲದ 23 ವರ್ಷದ ಚಿಕ್ಕಮಾದಪ್ಪ ಮೃತ ದುರ್ದೈವಿ ಸಹ ಬಂದು ಮಠದ ಆವರಣದಲ್ಲಿರುವ ಕೊಠಡಿಯಲ್ಲಿ ನೆಲೆಸಿದ್ದ. ಆದರೆ ಇಂದು ಕೆಲ ದುಷ್ಕರ್ಮಿಗಳು ಆತನ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಎಎಸ್‌ಪಿ ಲಕ್ಷ್ಮಣ್ ಅವರು ಪರಿಶೀಲನೆ ನಡೆಸುತ್ತಿದ್ದಾರೆ. ಶ್ವಾನದಳದ ಮೂಲಕ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com