ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಅಪಹರಣ, ಕೊಲೆ: ಆರೋಪಿ ಬಂಧನ

ಕ್ಷುಲ್ಲಕ ಕಾರಣಕ್ಕಾಗಿ 14 ವರ್ಷದ ವಿದ್ಯಾರ್ಥಿಯನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಅಪಹರಣ, ಕೊಲೆ: ಆರೋಪಿ ಬಂಧನ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ 14 ವರ್ಷದ ವಿದ್ಯಾರ್ಥಿಯನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಚೈತನ್ಯ ಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿದ್ದ ಮೂಡಲಪಾಳ್ಯ ನಿವಾಸಿ ಕಿರಣ್ ಯಾದವ್​​ ಮೃತ ಬಾಲಕ. ಫೆಬ್ರವರಿ 4ರಂದು ಕಿರಣ್ ನಾಪತ್ತೆಯಾಗಿದ್ದ. ಬಾಲಕ ಕಿರಣ್ ಮೃತದೇಹ ಜ್ಞಾನಭಾರತೀಯ ಸಾಯಿ ಮಂದಿರ ಬಳಿ ನಿನ್ನೆ ಪತ್ತೆಯಾಗಿತ್ತು.

ಶಾಲೆಗೆ ಹೋದ ಬಾಲಕ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ  ಆತಂಕಗೊಂಡ ಪೋಷಕರು ಚಂದ್ರಲೇಔಟ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಬಾಲಕ ಮೃತಪಟ್ಟಿರುವ ಸುದ್ದಿ ಪೋಷಕರಿಗೆ ಆಘಾತ ತಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಾಲೇಔಟ್ ಪೊಲೀಸರು ಆರೋಪಿ ಮಂಜುನಾಥ್​ ಎಂಬುವವನ್ನು ಬಂಧಿಸಿದ್ದಾರೆ. ಆರೋಪಿ ಮಂಜುನಾಥ್​ ಮೃತ ಬಾಲಕ ಕಿರಣ್​ ಪಕ್ಕದ ಮನೆ ನಿವಾಸಿಯಾಗಿದ್ದು, ಕಿರಣನನ್ನು ಬೈಕ್​’ನಲ್ಲಿ  ಕರೆದೊಯ್ದಿದ್ದ ಚಿತ್ರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕಿರಣ್ ನನ್ನು ಮಂಜುನಾಥನೇ ಅಪಹರಿಸಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಬಂಧಿತ ಆರೋಪಿ ಮಂಜುನಾಥ್ ಗೆ ಮಹಿಳೆ ಜೊತೆ ಅಕ್ರಮ ಸಂಬಂಧವಿದ್ದ ವಿಷಯ ಕಿರಣ ತಾಯಿಗೆ ತಿಳಿದಿತ್ತು. ಈ ಹಿನ್ನೆಲೆಯಲ್ಲಿ ಬಾಲಕನನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com