ಮರಕ್ಕೆ ಕಾರು ಡಿಕ್ಕಿ: ಇಬ್ಬರ ಸಾವು, ಮೂವರಿಗೆ ಗಾಯ

ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪ್ಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ಹಾರೋಹಳ್ಳಿ ಪೊಲೀಸ್...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಸಾತನೂರು: ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪ್ಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಶೆಡ್ ಬಳಿ ನಡೆದಿದೆ.

ಕನಕಪುರದ ದೊಡ್ಡಿ ಬೀದಿ ನಿವಾಸಿ ದೀಪು(24) ಮತ್ತು ರಾಜು(26) ಮೃತ ದುರ್ದೈವಿಗಳು. ಸೋಮ, ಗಿರಿ, ಆನಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ನೇಹಿತನ ಮದುವೆಗೆ ಬಟ್ಟೆ ಖರೀದಿಸಲು ಐವರು ಸ್ನೇಹಿತರು ಕಾರಿನಲ್ಲಿ ಬೆಂಗಳೂರಿಗೆ ತೆರಳಿ ವಾಪಸಾಗುತ್ತಿದ್ದರು. ಕುಂಬಾರ ಸ್ಟ್ರೀಟ್ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಅಪ್ಪಳಿಸಿದೆ. ಅಪಘಾತದಲ್ಲಿ ದೀಪು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ರಾಜು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com