ಹಿಂದೂ ಸಮಾಜೋತ್ಸವ: ಮಾ. 11ರಂದು ಮೈಸೂರಿಗೆ ತೊಗಾಡಿಯಾ

ಪ್ರವೀಣ್ ತೊಗಾಡಿಯಾ
ಪ್ರವೀಣ್ ತೊಗಾಡಿಯಾ
Updated on

ಮೈಸೂರು: ವಿಶ್ವ ಹಿಂದೂ ಪರಿಷತ್ ವತಿಯಿಂದ ಮಾರ್ಚ್ 11ರಂದು ಸಂಜೆ 4 ಗಂಟೆಗೆ ಇಲ್ಲಿನ ದೊಡ್ಡಕೆರೆ ಮೈದಾನದಲ್ಲಿ ನಡೆಯಲಿರುವ ‘ವಿರಾಟ ಹಿಂದೂ ಸಮಾಜೋತ್ಸವ’ ಕಾರ್ಯಕ್ರಮದಲ್ಲಿ ಪರಿಷತ್ತಿನ ಅಂತರರಾಷ್ಟ್ರೀಯ ಕಾರ್ಯಾ­ಧ್ಯಕ್ಷ ಡಾ. ಪ್ರವೀಣ್ ತೊಗಾಡಿಯಾ ಅವರು ಮುಖ್ಯ ಭಾಷಣ ಮಾಡಲಿದ್ದಾರೆ.

ಜಿಲ್ಲೆಯ ಹಲವು ಮಠಾಧೀಶರು ಭಾಗವಹಿಸುವ ಈ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಶಿವಮೊಗ್ಗ ವಿ.ವಿ ನಿವೃತ್ತ ಕುಲಪತಿ ಡಾ. ಕೆ. ಚಿದಾನಂದಗೌಡ ಆಯ್ಕೆಯಾಗಿದ್ದು, ಕರ್ನಾಟಕ ಪ್ರದೇಶ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಎಂ. ರಾಜೇಂದ್ರ ಕಾರ್ಯಾಧ್ಯಕ್ಷರಾಗಿದ್ದಾರೆ ಎಂದು ಪರಿಷತ್ತಿನ ಮೈಸೂರು ನಗರಾಧ್ಯಕ್ಷ ಎನ್.ಕೆ. ರಾಜೇಂದ್ರಬಾಬು ಅವರು ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಪ್ರವೀಣ್ ತೊಗಾಡಿಯಾ ಅವರ ಮೈಸೂರಿನ ಪ್ರವಾಸ ಕುರಿತು ಈಗಾಗಲೇ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಯಾರಿಂದಲೂ ಆಕ್ಷೇಪ ವ್ಯಕ್ತವಾಗಿಲ್ಲ. ಬೆಂಗಳೂರು ನಗರಕ್ಕೆ ಮಾತ್ರ ಅವರು ಬರಬಾರದೆಂದು ತಿಳಿಸಲಾಗಿತ್ತು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com