ಆಹಾರದಲ್ಲಿ ವಿಷ ಸೇರಿಸಿ ಬೀದಿನಾಯಿಗಳ ಹತ್ಯೆ

ಶವಗಳ ಮರಣೋತ್ತರ ಪರೀಕ್ಷೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಆಹಾರದಲ್ಲಿ ವಿಷ ಸೇರಿಸಿ ಬೀದಿನಾಯಿಗಳನ್ನು ಹತ್ಯೆ ಮಾಡಿರುವ ಘಟನೆ ಜಗಜೀವನ್‌ರಾಮ್ ನಗರದಲ್ಲಿ ಭಾನುವಾರ ರಾತ್ರಿ ನಡೆದಿದ್ದು, ಸೋಮವಾರ ಬೆಳಕಿಗೆ ಬಂದಿದೆ.

ಈ ಪ್ರದೇಶದಲ್ಲಿ ಸುಮಾರು 10 ಶ್ವಾನಗಳು ಹಾಗೂ ಕಾಗೆಗಳು ಮೃತಪಟ್ಟಿವೆ. ಬೀದಿ ಬದಿಯಲ್ಲಿ ಅಲ್ಲಲ್ಲಿ ಬಿದ್ದಿದ್ದ ನಾಯಿ, ಕಾಗೆಗಳನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭಾನುವಾರ ಈದ್-ಮಿಲಾದ್ ಹಬ್ಬ ಇದ್ದ ಹಿನ್ನೆಲೆಯಲ್ಲಿ ಯಾರೋ ದುಷ್ಕರ್ಮಿಗಳು ಬಿರಿಯಾನಿಯಲ್ಲಿ ವಿಷ ಸೇರಿಸಿ ಬಡಿಸಿದ್ದಾರೆ.

ಈ ಸಂಬಂಧ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿ ಸತ್ಯ ಅವರು ಜಗಜೀವನ್ ರಾಮ್ ನಗರದಲ್ಲಿ ದೂರು ದಾಖಲಿಸಿದ್ದಾರೆ.

ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದ್ದು, ವರದಿ ಬಂದ ನಂತರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com