ಅಂತೂ ಇಳಿಯುತ್ತಂತೆ ಬಸ್ ಪ್ರಯಾಣ ದರ

ಕೊನೆಗೂ ಬಸ್ ಪ್ರಯಾಣ ದರ ಇಳಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ...
ಅಂತೂ ಇಳಿಯುತ್ತಂತೆ ಬಸ್ ಪ್ರಯಾಣ ದರ

ಬೆಂಗಳೂರು: ಕೊನೆಗೂ ಬಸ್ ಪ್ರಯಾಣ ದರ ಇಳಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಸಾರ್ವಜನಿಕ ಆಗ್ರಹ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಅಧಿಕಾರಿಗಳ ಜತೆ ಚರ್ಚೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣ ದರ ಇಳಿಕೆಗೆ ಹಸಿರು ನಿಶಾನೆ ತೋರಿದ್ದಾರೆ ಎಂದು ತಿಳಿದು ಬಂದಿದೆ.

ಇಂಧನ ಬೆಲೆ ಇಳಿಕೆ ಆಧರಿಸಿ ಈಗಿನ ಪ್ರಯಾಣ ದರದಲ್ಲಿ ಶೇ.3ರಿಂದ ಶೇ.5ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ ವಿಷಯ ಪ್ರಕಟಿಸಲಿದ್ದಾರೆ.

ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ನಾನು ಪ್ರಯಾಣ ದರ ಇಳಿಕೆ ಬಗ್ಗೆ ಪ್ರಸ್ತಾಪಿಸಿದ್ದು ನಿಜ. ಆದರೆ ಮಾತಿಗೆ ತಪ್ಪಿಲ್ಲ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com