ಬೆಂಗಳೂರು: ನಟಿ ಮೈತ್ರಿಯಾ ಗೌಡ ತಮ್ಮ ವಿರುದ್ದ ದಾಖಲಿಸಲಾಗಿರುವ ಅತ್ಯಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದು ಪಡಿಸುವಂತೆ ಕೋರಿ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ಪೀಠ ಗುರುವಾರ ವಜಾಗೊಳಿಸಿದೆ.
ಕಾರ್ತಿಕ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋಟ್ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರ ನೇತ್ರತ್ವದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದ್ದು, ಅಲ್ಲದೆ ಮೊಕದ್ದಮೆಯನ್ನು ರದ್ದುಪಡಿಸಲು ನಿರಾಕರಿಸಿದೆ.
ಕಾರ್ತಿಕ್ ಗೌಡ ಅವರು ಮಂಗಳೂರಿನಲ್ಲಿ ನನ್ನನ್ನು ವಿವಾಹವಾಗಿದ್ದಾರೆಂದು ನಟಿ ಮೈತ್ರಿಯಾ ಗೌಡ ಅವರು ಬೆಂಗಳೂರಿನ ಆರ್.ಟಿ.ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಂಗಳೂರಿನ ಮನೆಯೊಂದರಲ್ಲಿ ಕಾರ್ತಿಕ್ಗೌಡ ನನಗೆ ಅರಿಶಿನ ದಾರ ಕಟ್ಟಿ ವಿವಾಹವಾಗಿದ್ದಾರೆ. ಅಲ್ಲದೆ ನನ್ನ ಜೊತೆ ಲೈಂಗಿಕ ಸಂಪರ್ಕ ಹೊಂದಿದ್ದರು ಎಂದು ದೂರು ದಾಖಲಿಸಿದ್ದರು.
Advertisement