ಉಪನ್ಯಾಸಕ ಆತ್ಮಹತ್ಯೆ

ಶೇಷಾದ್ರಿಪುರ ಪಿಯು ಕಾಲೇಜಿನ ಉಪನ್ಯಾಸಕ ಮುನಿರಾಜು(32) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ...
ಉಪನ್ಯಾಸಕ ಆತ್ಮಹತ್ಯೆ
Updated on

ಬೆಂಗಳೂರು: ಶೇಷಾದ್ರಿಪುರಂ ಪಿಯು ಕಾಲೇಜಿನ ಉಪನ್ಯಾಸಕ ಮುನಿರಾಜು(32) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಸವೇಶ್ವರ ನಗರ ಬಿಇಎಂಎಲ್ ಕಾಲೋನಿಯಲ್ಲಿ ಪತ್ನಿಯೊಂದಿಗೆ ಮುನಿರಾಜು ವಾಸವಿದ್ದರು. ಮದ್ಯವ್ಯಸನಿಯಾಗಿದ್ದರಿಂದ ಮನೆಯಲ್ಲಿ ದಂಪತಿ ನಡುವೆ ಜಗಳವಾಗುತ್ತಿತ್ತು.
ಗುರುವಾರ ರಾತ್ರಿಯೂ ಕುಡಿದು ಬಂದು ಪತ್ನಿಯೊಂದಿಗೆ ಜಗಳವಾಡಿದ್ದರು.

ಈ ವೇಳೆ ಬೇಸರ ಮಾಡಿಕೊಂಡ ಮುನಿರಾಜು ಕೊಠಡಿಗೆ ತೆರಳಿ ದುಪ್ಪಟ್ಟಾದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com