ಲೋಕಾಯುಕ್ತ ಪಾವಿತ್ರ್ಯ ನಾಶವಾಗಿದೆ: ಜನಾರ್ದನ ಪೂಜಾರಿ

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣವನ್ನು ತಕ್ಷಣ ಸಿಬಿಐಗೆ ಒಪ್ಪಿಸಬೇಕು ಎಂದು ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ...
ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ
ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ
Updated on

ಉಡುಪಿ: ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣವನ್ನು ತಕ್ಷಣ ಸಿಬಿಐಗೆ ಒಪ್ಪಿಸಬೇಕು ಎಂದು ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಿಂದಾಗಿ ಲೋಕಾಯುಕ್ತ ಸಂಸ್ಥೆಯ ಪಾವಿತ್ರ್ಯ, ಘನತೆ ಸರ್ವನಾಶವಾಗಿದೆ. ಇದಕ್ಕೆ ಕಾರಣರಾದ ಈ ಹಗರಣದ ಪ್ರಮುಖ ಆರೋಪಿ ಲೋಕಾಯುಕ್ತ ನ್ಯಾ. ಭಾಸ್ಕರರಾವ್ ಅವರ ಮಗ ಅಶ್ವಿನ್ ರಾವ್ ಅವರನ್ನು ಕೂಡಲೇ ಬಂಧಿಸ ಬೇಕು. ಅವರ ವಿರುದ್ಧ ಈಗಾಗಲೇ ಕೋಟ್ಯಂತರ ರುಪಾಯಿ ಲಂಚ ಪಡೆದ ದೂರು-ಎಫ್ಐಆರ್ ದಾಖಲಾಗಿದೆ. ಇದರಿಂದ ಅವರ ಬಂಧನಕ್ಕೆ ಕಾನೂನಿನಲ್ಲಿಯೂ ಪೂರ್ಣ ಅವಕಾಶಗಳಿವೆ ಎಂದು ಒತ್ತಾಯಿ ಸಿದರು.

ಈ ಹಗರಣದ ಬಗ್ಗೆ ಸರ್ಕಾರದ ಮೇಲೆ ಹೆಗ್ಗಣ ಎಸೆಯುವ ಮೊದಲು ವಿಪಕ್ಷಗಳು ತಮ್ಮ ಮನೆಯಲ್ಲಿ ಹೆಗ್ಗಣ ಸತ್ತುಬಿದ್ದಿರುವುದನ್ನು ಗಮನಿಸಬೇಕು. ಬಿಜೆಪಿ ನಾಯಕ ಯಡಿಯೂರಪ್ಪ ಅವರ ಮೇಲೆ 15 ಪ್ರಕರಣ ಮತ್ತು ಜೆಡಿಎಸ್ ನಾಯಕ ಕುಮಾರಸ್ವಾಮಿ ಮೇಲೆ 2 ಪ್ರಕರಣ ಬಗ್ಗೆ ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದೆ.

ಇದನ್ನು ಅವರು ಮರೆಯ ಬಾರದು. ಈ ಇಬ್ಬರು ನಾಯಕರು ಇತ್ತೀಚೆಗೆ ರೈತರ ಪರವಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಇದು ಮೆಚ್ಚುವಂತಹ ಕೆಲಸ. ಆದರೆ, ಇದು ರಾಜಕೀಯ ಒಳಗುಟ್ಟು ಗೊತ್ತಿರುವುದರಿಂದ ರಾಜ್ಯದ ಜನತೆ ಅವರನ್ನು ನಂಬುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com