ಆಯ್ದ ಸಾರಿಗೆ ದರ ಇಳಿಕೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪ್ರತಿಷ್ಠಿತ ಸಾರಿಗೆ ವಾಹನಗಳ ಪ್ರಯಾಣ ದರವನ್ನು ಶೇ.10ರಷ್ಟು ಕಡಿತಗೊಳಿಸಿದೆ. ಆದರೆ, ಶನಿವಾರ ಹಾಗೂ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪ್ರತಿಷ್ಠಿತ ಸಾರಿಗೆ ವಾಹನಗಳ ಪ್ರಯಾಣ ದರವನ್ನು ಶೇ.10ರಷ್ಟು ಕಡಿತಗೊಳಿಸಿದೆ. ಆದರೆ, ಶನಿವಾರ ಹಾಗೂ ಭಾನುವಾರ ಸಂಚರಿಸುವ ಪ್ರಯಾಣಿಕರಿಗೆ ಈ ದರ ಅನ್ವಯವಾಗುವುದಿಲ್ಲ. ಸೋಮವಾರ, ಮಂಗಳವಾರ, ಬುಧವಾರ ಮತ್ತು ಗುರುವಾರಗಳಂದು ಪ್ರಯಾಣಿಸುವ ಪ್ರಯಾಣಿಕರುಗಳಿಗೆ ಮಾತ್ರ ಈ ರಿಯಾಯಿತಿ ಸಿಗಲಿದೆ.

ನಿಗಮದ ಪ್ರತಿಷ್ಠಿತ ಸಾರಿಗೆಗಳಾದ ರಾಜಹಂಸ, ವೈಭವ, ಐರಾವತ, ಐರಾವತ ಮಲ್ಟಿ ಆ್ಯಕ್ಸೆಲ್, ಎಸಿ ಸ್ಲೀಪರ್, ನಾನ್ ಎಸಿ ಸೀಪರ್, ಬ್ಲಿಸ್, ಸುಪೀರಿಯಾ ವಾಹನಗಳಿಗೆ ಈ ದರ ಅನ್ವಯವಾಗಲಿದೆ. ಜುಲೈ 1ರಿಂದ ಈ ಕಡಿತದ ದರ ಜಾರಿಯಾಗಿದ್ದು, ಸೆಪ್ಟೆಂಬರ್ ಕೊನೆವರೆಗೆ ರಿಯಾಯಿತಿ ಸಿಗಲಿದೆ. ಈ ತಿಂಗಳುಗಳಲ್ಲಿ ಜನರ ಓಡಾಟ ಕಡಿಮೆ ಇರುತ್ತದೆ.

ಸಾಕಷ್ಟು ಬಸ್‍ಗಳು ಖಾಲಿ ಸಂಚರಿಸುತ್ತವೆ. ಹಾಗಾಗಿ ಪ್ರಯಾಣಿಕರನ್ನು ಸೆಳೆಯುವ ಹಿನ್ನೆಲೆಯಲ್ಲಿ ಹಾಗೂ ಇಲಾಖೆ ಆದಾಯ ಹೆಚ್ಚಿಸುವ ಉದ್ದೇಶದಿಂದ ಈ ರಿಯಾಯಿತಿ ನೀಡಲಾಗಿದೆ. ರಿಯಾಯಿತಿ ಬಗ್ಗೆ ಇಲಾಖೆ ವೆಬ್‍ಸೈಟ್‍ನಲ್ಲಿಯೂ ಮಾಹಿತಿ ಡಲಾಗಿದೆ ಎಂದು ಕರಾರಸಾ ನಿಗಮದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com