ರೈತರ ಆತ್ಮಹತ್ಯೆ: ಅಧಿವೇಶನದ ಬಳಿಕ ರಾಜ್ಯಕ್ಕೆ ಭೇಟಿ ನೀಡಲಿರುವ ರಾಹುಲ್

ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನೊಂದ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಧಾನ ಮಂಡಲದ ಅಧಿವೇಶನದ ಬಳಿಕ ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆ ಇದೆ...
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ
Updated on

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನೊಂದ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಧಾನ
ಮಂಡಲದ ಅಧಿವೇಶನದ ಬಳಿಕ ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆ ಇದೆ.

ಕಾಂಗ್ರೆಸ್‍ನ ಉನ್ನತ ಮೂಲಗಳ ಪ್ರಕಾರ, ಇದಕ್ಕೆ ಪೂರಕವಾಗಿ ಎಐಸಿಸಿ ಕಾರ್ಯದರ್ಶಿ ಡಾ. ಚಲ್ಲ ಕುಮಾರ್ ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದು, ರೈತರ ಆತ್ಮಹತ್ಯೆ ಪ್ರಕರಣ ಸಂಬಂಧ ಸರ್ಕಾರ ಮತ್ತು ಪಕ್ಷದಿಂದ ಪ್ರತ್ಯೇಕ ಮಾಹಿತಿ ಪಡೆದಿದ್ದಾರೆ. ಮೈಸೂರು, ಯಾದಗಿರಿ ಅಥವಾ ಮಂಡ್ಯ ಜಿಲ್ಲೆಗಳ ಪೈಕಿ ಒಂದು ಕಡೆ ಭೇಟಿ ನೀಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com