ಆಂಜನೇಯ ಸ್ವಾಮಿ ದೇಗುಲದಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಪ್ರಖ್ಯಾತಿ ದೇವಾಲಯವಾದ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಯಲಗೂರು ಗ್ರಾಮದ ಆಂಜನೇಯ ಸ್ವಾಮಿ...
ಯಲಗೂರು ಆಂಜನೇಯ ಸ್ವಾಮಿ ದೇಗುಲದಲ್ಲಿ ಕಳ್ಳತನ
ಯಲಗೂರು ಆಂಜನೇಯ ಸ್ವಾಮಿ ದೇಗುಲದಲ್ಲಿ ಕಳ್ಳತನ

ಯಲಗೂರು: ಪ್ರಖ್ಯಾತಿ ದೇವಾಲಯವಾದ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಯಲಗೂರು ಗ್ರಾಮದ ಆಂಜನೇಯ ಸ್ವಾಮಿ ದೇಗುಲದಲ್ಲಿ ಕಳ್ಳತನ ನಡೆದಿದೆ.

ಆಂಜನೇಯ ಸ್ವಾಮಿಯ ಚಿನ್ನದ ಕಿರೀಟ, ಚಿನ್ನದ ಹಸ್ತ ಹಾಗೂ ಚಿನ್ನ ಲೇಪನದ ತೋಳ ಬಂದಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನ ನಡೆಸುತ್ತಿದ್ದು, ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗರ್ಭಗುಡಿಯ ದ್ವಾರವನ್ನು ಮುರಿದು ಲಕ್ಷಾಂತರ ರುಪಾಯಿ ಬೆಲೆ ಬಾಳುವ ಚಿನ್ನವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಭದ್ರತಾ ಲೋಪದಿಂದ ಈ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com