ಎಂಎನ್ ರೆಡ್ಡಿಗೆ ಬಡ್ತಿ, ನೂತನ ಪೊಲೀಸ್ ಆಯುಕ್ತರಾಗಿ ಎನ್‌ಎಸ್ ಮೇಘರಿಕ್ ನೇಮಕ

ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಎನ್.ಎಸ್.ಮೇಘರಿಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ನಗರ ಪೊಲೀಸ್ ಆಯುಕ್ತರಾಗಿದ್ದ...
ಎನ್‌ಎಸ್ ಮೇಘರಿಕ್ - ಎಂಎನ್ ರೆಡ್ಡಿ
ಎನ್‌ಎಸ್ ಮೇಘರಿಕ್ - ಎಂಎನ್ ರೆಡ್ಡಿ

ಬೆಂಗಳೂರು: ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಎನ್.ಎಸ್.ಮೇಘರಿಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ನಗರ ಪೊಲೀಸ್ ಆಯುಕ್ತರಾಗಿದ್ದ ಎಂ.ಎನ್.ರೆಡ್ಡಿ ಅವರಿಗೆ ಡಿಜಿಪಿಯಾಗಿ ಬಡ್ತಿ ನೀಡಿದೆ.

ಎಂಎನ್ ರೆಡ್ಡಿ ಅವರನ್ನು ಅಗ್ನಿಶಾಮಕ ಹಾಗೂ ಗೃಹ ರಕ್ಷಕ ದಳದ ಡಿಜಿಪಿಯಾಗಿ ನೇಮಕ ಮಾಡಲಾಗಿದ್ದು, ಈ ಸಂಬಂಧ ಇಂದು ಸಂಜೆಯೊಳಗೆ ಸರ್ಕಾರ ಅಧಿಕೃತ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.

ಇದೇ ವೇಳೆ ಮೂವರು ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಆಡಳಿತ ವಿಭಾಗದ ಡಿಜೆಪಿಯಾಗಿ ಪ್ರವೀಣ್ ಸೂದ್, ಸಿಐಡಿ ಡಿಜಿಪಿಯಾಗಿ ಕಿಶೋರ್‌ಚಂದ್ರ ಹಾಗೂ ಅಲೋಕ್ ಮೋಹನ್ ಅವರನ್ನು ಕಾನೂನು ಸುವ್ಯವಸ್ಥೆ ಎಡಿಜಿಪಿಯಾಗಿ ನೇಮಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com