ಬೆಂಗಳೂರು: ನಗರದ ಮಿನರ್ವ ವೃತ್ತ ಸಮೀಪದ ಮಾವಳ್ಳಿಯ ಬಿಸಿಲು ಮಾರಮ್ಮ ದೇವಸ್ಥಾನದಲ್ಲಿ ಮಂಗಳವಾರ ನಡೆಯಲಿರುವ ಹಬ್ಬದ ವೇಳೆ ನಡೆಯಲಿರುವ ಪ್ರಾಣಿ ಬಲಿಯನ್ನು ತಡೆಯಬೇಕು ಎಂದು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಹಬ್ಬದ ಹಿನ್ನಲೆಯಲ್ಲಿ ನಗರದ ಬಿಸಿಲು ಮಾರಮ್ಮ ದೇವಸ್ಥಾನದಲ್ಲಿ ಮಂಗಳವಾರ ಕುರಿ, ಕೋಳಿ, ದೇವಸ್ಥಾನದಲ್ಲಿ ಮಂಗಳವಾರ ಕುರಿ, ಕೋಳಿ, ಆಡುಹೋ, ಟಗರು, ಹುಂಜ ಸೇರಿದಂತೆ ಇನ್ನಿತರ ಪ್ರಾಣಿಗಳನ್ನು ಬಲಿ ನಡೆಸಲು ಸಿದ್ಧತೆ ನಡೆಸಲಾಗಿದೆ.
ಇದು ಕರ್ನಾಟಕ ಪ್ರಾಣಿ ಬಲಿ ಪ್ರತಿಬಂಧಕ ಅಧಿನಿಯಮ-1959ರ ಉಲ್ಲಂಘನೆಯಾಗಿದೆ. ಹೀಗಾಗಿ ಪ್ರಾಣಿ ಬಲಿಯನ್ನು ತಡೆಯಲು ಗೃಹ ಇಲಾಖೆಗೆ ಆದೇಶಿಸಬೇಕು ಎಂದು ಕೋರಿ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಮತ್ತು ನ್ಯಾ.ರಾಮಮೋಹನ ರೆಡ್ಡಿ ಅವರಿದ್ದ ವಿಭಾಗೀಯ ಪೀಠವು, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಅರ್ಜಿದಾರ ಸಂಸ್ಥೆಯ ಮನವಿಯ ಹಾಗೂ ಕರ್ನಾಟಕ ಪ್ರಾಣಿ ಬಲಿ ಪ್ರತಿಬಂಧಕ ಅಧಿನಿಯಮ ಕಾಯ್ದೆ -195ರ ನಿಯಮಗಳನ್ನು ಪರಿಗಣಿಸಬೇಕು. ರಾಜ್ಯದಲ್ಲಿ ಪ್ರಾಣಿ ಬಲಿ ತಡೆಯುವುದಕ್ಕೆ ಸಂಬಂಧಿಸಿದಂತೆ 2009ರಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ಆದೇಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾ ನಕ್ಕೆ ತರಬೇಕು ಎಂದು ಆದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.
Advertisement