ಅಲ್ಲಮನನ್ನು ಮರೆತ ಸರ್ಕಾರ: ಶಾಂತವೀರ ಸ್ವಾಮೀಜಿ

ಸಮಾಜದ ಓರೆ-ಕೋರೆಗಳನ್ನು ತಿದ್ದಲು ಕಾರಣನಾದ ವಚನಕಾರ ಅಲ್ಲಮಪ್ರಭುವಿ ನ ಹೆಸರಿನಲ್ಲಿ ಸರ್ಕಾರ ಯಾವುದೇ ಪ್ರಶಸ್ತಿ ನೀಡುತ್ತಿಲ್ಲ ಎಂದು ಕೊಳದ ಮಠದ ಪೀಠಾಧ್ಯಕ್ಷ ಶಾಂತವೀರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು...
ಕೊಳದ ಮಠದ ಪೀಠಾಧ್ಯಕ್ಷ ಶಾಂತವೀರ ಸ್ವಾಮೀಜಿ
ಕೊಳದ ಮಠದ ಪೀಠಾಧ್ಯಕ್ಷ ಶಾಂತವೀರ ಸ್ವಾಮೀಜಿ

ಬೆಂಗಳೂರು: ಸಮಾಜದ ಓರೆ-ಕೋರೆಗಳನ್ನು ತಿದ್ದಲು ಕಾರಣನಾದ ವಚನಕಾರ ಅಲ್ಲಮಪ್ರಭುವಿ ನ ಹೆಸರಿನಲ್ಲಿ ಸರ್ಕಾರ ಯಾವುದೇ ಪ್ರಶಸ್ತಿ ನೀಡುತ್ತಿಲ್ಲ ಎಂದು ಕೊಳದ ಮಠದ ಪೀಠಾಧ್ಯಕ್ಷ ಶಾಂತವೀರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಭಾನುವಾರ ಕೊಳದಮಠದ ಆವರಣದಲ್ಲಿ ಏರ್ಪಡಿಸಿದ್ದ `ಅಲ್ಲಮಶ್ರೀ' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣನವರು ಕೈಗೊಂಡ ವಚನ ಕ್ರಾಂತಿಗೆ ಅಲ್ಲಮರೇ ಅಡಿಪಾಯ ಹಾಕಿದವರು. ಆದರೂ ಅವರ ಹೆಸರಿನಲ್ಲಿ ಸರ್ಕಾರ ಪ್ರಶಸ್ತಿ ನೀಡುತ್ತಿಲ್ಲ. ಹೀಗಾಗಿ ಅಲ್ಲಮಶ್ರೀ ಪ್ರಶಸ್ತಿಯನ್ನು ಸ್ಥಾಪಿಸಿ, ಅದನ್ನು ಬ್ಯಾಹ್ಯಾಕಾಶ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ ಇಸ್ರೋ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಅವರಿಗೆ ನೀಡಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್‍ನ ಹಿರಿಯ ಮುಖಂಡ ಬೂಟಾಸಿಂಗ್ ಮಾತನಾಡಿ, ಸನಾತನ ಧರ್ಮ, ಸಿಖ್‍ಧರ್ಮ ಒಳಗೊಂಡಂತೆ ಎಲ್ಲಾ ಧರ್ಮಗಳೂ ಸಂತರನ್ನು ಕುರಿತು ಪೂಜ್ಯ ಭಾವನೆ ಹೊಂದಿವೆ. ವಿಶ್ವಶಾಂತಿಗಾಗಿ ಸರ್ವಧರ್ಮ ಸಮ್ಮೇಳನ ನಡೆಯಬೇಕಾಗಿದೆ. ನಾನು ಮೊದಲು ಧಾರ್ಮಿಕ ನಂಬಿಕೆಯುಳ್ಳವ, ನಂತರ ರಾಜಕಾರಣಿ ಎಂದರು. ಶಾಸಕ ಹ್ಯಾರಿಸ್ ಮಾತನಾಡಿ, ಭಾರತೀಯರೆಲ್ಲಾ ಒಂದಾದರೆ ದೇಶ ಕ್ಷಿಪ್ರ ಬೆಳವಣಿಗೆ ಕಾಣುತ್ತದೆ. ಆದರೆ, ನಮ್ಮ ನಡುವೆಯೇ ಹೋರಾಟ ನಡೆಯುತ್ತಿರುವುದರಿಂದ ಇದು ಸಾಧ್ಯವಾಗುತ್ತಿಲ್ಲ ಎಂದು ವಿಷಾದಿಸಿದರು.

ಇಸ್ರೋ ಅಧ್ಯಕ್ಷ ಕಿರಣ್ ಕುಮಾರ್ ಅನುಪಸ್ಥಿತಿಯಲ್ಲಿ `ಅಲ್ಲಮಶ್ರೀ ಪ್ರಶಸ್ತಿ' ಪ್ರದಾನ ಮಾಡಲಾಯಿತು. ನಿವೃತ್ತ ಅಧಿಕಾರಿ ಡಾ. ಸಿ. ಸೋಮಶೇಖರ್, ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಂ. ಮಹದೇವಪ್ಪ, ಮಹದೇವ ಹೊರಟ್ಟಿ ಮತ್ತಿತರರು ಭಾಗವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com