ಚುನಾವಣೆ ನಂತರವೂ ನಗರ ಸಂಚಾರ: ಸಿಎಂ ಸಿದ್ದು

ಬಿಬಿಎಂಪಿ ಚುನಾವಣೆ ನಂತರವೂ ನಗರ ಪ್ರದಕ್ಷಿಣೆ ಮಾಡಿ ಜನರ ಸಮಸ್ಯೆ ಆಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬಿಬಿಎಂಪಿ ಚುನಾವಣೆ ನಂತರವೂ ನಗರ ಪ್ರದಕ್ಷಿಣೆ ಮಾಡಿ ಜನರ ಸಮಸ್ಯೆ ಆಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ದಿನ ನಗರ ಪ್ರದಕ್ಷಿಣೆ ಸಾಧ್ಯವಾಗಿರಲಿಲ್ಲ. ಈಗ ನಿರಂತರವಾಗಿ ಮಾಡುತ್ತಿದ್ದು, ಇದು ಮುಂದಿನ ದಿನಗಳಲ್ಲಿಯೂ ನಿಲ್ಲುವುದಿಲ್ಲ. ಹಾಗೆಂದ ಮಾತ್ರಕ್ಕೆ ಇದು ಕೊನೆಯೂ ಅಲ್ಲ. ಬಿಬಿಎಂಪಿ ಚುನಾವಣೆ ದಿನಾಂಕ ನಿಗದಿಯಾಗುವವರೆಗೂ ನಿರಂತರವಾಗಿ ನಡೆಸಲಾಗುತ್ತದೆ. ದಿನಾಂಕ ಹೊರಬಿದ್ದ ನಂತರ ಸ್ಥಗಿತಗೊಳಿಸಲಾಗುವುದು. ನಂತರ ಮತ್ತೆ ಮುಂದುವರೆಸಲಾಗುವುದು. ನಗರದ ಎಲ್ಲಾ ಬಡಾವಣೆಗಳಿಗೆ ಭೇಟಿ ನೀಡಿ, ಜನರ ಸಮಸ್ಯೆ ಆಲಿಸಲಾಗುವುದು ಸಿದ್ದರಾಮಯ್ಯ ಹೇಳಿದರು.

ಭಾನುವಾರ ನಗರದ ಮೂರು ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಂಚಾರ ನಡೆಸಿದಾಗ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com