ಚಲನಚಿತ್ರ ನಿರ್ದೇಶಕ ಸಂಘದ ಕಾರ್ಯಕಾರಿಣಿ ಚುನಾವಣೆಗೆ ತಡೆ

ಕರ್ನಾಟಕ ರಾಜ್ಯ ಚಲನಚಿತ್ರ ನಿರ್ದೇಶಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಜುಲೈ 12ರಂದು ನಡೆಸಲು ಉದ್ದೇಶಿಸಿದ್ದ ಚುನಾವಣೆಗೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ...
ಕರ್ನಾಟಕ ಹೈ ಕೋರ್ಟ್
ಕರ್ನಾಟಕ ಹೈ ಕೋರ್ಟ್

ಬೆಂಗಳೂರು: ಕರ್ನಾಟಕ ರಾಜ್ಯ ಚಲನಚಿತ್ರ ನಿರ್ದೇಶಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಜುಲೈ 12ರಂದು ನಡೆಸಲು ಉದ್ದೇಶಿಸಿದ್ದ ಚುನಾವಣೆಗೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.

ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ನಡೆಸಲು ಸಂಘದ ಅಧ್ಯಕ್ಷ ಪಿ.ಎಚ್.ವಿಶ್ವನಾಥ್ ನೇತೃತ್ವದ ತುರ್ತು ಸಭೆ ಕೈಗೊಂಡಿದ್ದ ನಿರ್ಣಯ ಪ್ರಶ್ನಿಸಿ, ಸಂಘದ ಪ್ರಧಾನ ಕಾರ್ಯದರ್ಶಿ ಟೇಶಿ ವೆಂಕಟೇಶ್ ಮತ್ತಿತರ ಪಾದಾಧಿಕಾರಿಗಳು ಹೈಕೋರ್ಟ್‍ನಲ್ಲಿ ಅರ್ಜಿ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ. ಎ.ಎಸ್.ಬೋಪಣ್ಣ ಅವರು ಚುನಾವಣೆಗೆ ತಡೆ ನೀಡಿ ವಿಚಾರಣೆ ಮುಂದೂಡಿದೆ.

ಸಂಘದ ಮಾಸಿಕ ಸಭೆ ಕರೆಯಲು ಮತ್ತು ಸಮರ್ಪಕವಾಗಿ ಕಾರ್ಯ ಚಟುವಟಿಕೆಗಳನ್ನು ನಿರ್ವಹಿಸಲು ವಿಫಲವಾದ ಹಿನ್ನೆಲೆಯಲ್ಲಿ ಅಧ್ಯಕ್ಷ ಪಿ.ಎಚ್. ವಿಶ್ವನಾಥ್ ಅವರ ವಿರುದ್ಧ ಕಾರ್ಯಕಾರಿ ಸಮಿತಿಯ 13 ಮಂದಿ ಅವಿಶ್ವಾಸ ನಿರ್ಣಯ ಕೈಗೊಂಡಿದ್ದರು. ಜತೆಗೆ, ಅಧ್ಯಕ್ಷ ಸ್ಥಾನದಿಂದ ಕೆಳಗಿಯಲು ಒತ್ತಾಯಿಸಿ ಮಾ.5ರಂದು ನಿರ್ಣಯ ಕೈಗೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com