ಹಾಸನ: ಸ್ನೇಹಿತರೊಂದಿಗೆ ಇಸ್ಪೀಟ್ ಆಡುತ್ತಿದ್ದ ಮೈಸೂರು ಸಂಸದ ಪ್ರತಾಪ ಸಿಂಹ ಸಹೋದರ ವಿಕ್ರಂ ಸಿಂಹ ಸೇರಿ 9 ಮಂದಿಯನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.
ವಿಕ್ರಂ ಅವರು ಸಕಲೇಶಪುರ ತಾಲೂಕಿನ ಬಿರಡಹಳ್ಳಿಯ ಮನೆಯೊಂದರಲ್ಲಿ ಇಸ್ಪೀಟ್ ಆಡುತ್ತಿದ್ದರು. ಖಚಿತ ಮಾಹಿತಿಯನ್ನು ಆಧರಿಸಿ ಡಿವೈಎಸ್ಸಿ ಪಿ.ವಿ.ಸ್ನೇಹಾ ಅವರು ಸಿಬ್ಬಂದಿ ಜತೆ ದಾಳಿ ನಡೆಸಿ 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ 14 ಸಾವಿರ ರುಪಾಯಿ ನಗದು ಹಾಗೂ 14 ಮೊಬೈಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಕ್ರಂ ಸಿಂಹಗೆ ಜಾಮೀನು: ಜೂಜಾಡುಚ್ಚಿದ್ದ ವೇಳೆ ನಿನ್ನೆ ಬಂಧನಕ್ಕೊಳಗಾಗಿದ್ದ ಮೈಸೂರು ಸಂಸದ ಪ್ರತಾಪ ಸಿಂಹ ಸಹೋದರ ವಿಕ್ರಂ ಸಿಂಹ ಶನಿವಾರ ಜಾಮೀನಿನ ಮೇರೆಗೆ ಬಿಡುಗಡೆಯಾಗಿದ್ದಾರೆ.
Advertisement