ಪಾದಯಾತ್ರಿಗಳಿಗೆ ಲಾರಿ ಡಿಕ್ಕಿ: ಮೂವರ ದುರ್ಮರಣ

ಶ್ರೀಶೈಲ ದೇವಸ್ಥಾನಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತರ ಮೇಲೆ ಲಾರಿಯೊಂದು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪಾದಯಾತ್ರಿಗಳಿಗೆ ಲಾರಿ ಡಿಕ್ಕಿ(ಸಾಂದರ್ಭಿಕ ಚಿತ್ರ)
ಪಾದಯಾತ್ರಿಗಳಿಗೆ ಲಾರಿ ಡಿಕ್ಕಿ(ಸಾಂದರ್ಭಿಕ ಚಿತ್ರ)

ಮಲಿಯಾಬಾದ:  ಶ್ರೀಶೈಲ ದೇವಸ್ಥಾನಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತರ ಮೇಲೆ ಲಾರಿಯೊಂದು ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಯಚೂರಿನ ಮಲಿಯಾಬಾದನ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅಶೋಕ್(30), ಭಾಗ್ಯಶೀ(35) ಹಾಗೂ ಸಂಗನಗೌಡ(42) ಮೃತ ದುರ್ದೈವಿಗಳು. ಅಪಘಾತದ ಬಳಿಕ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ.

ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com