ಬೀದರ್: ನಗರದ ಗಾದಗಿ ರಸ್ತೆಯಲ್ಲಿ ನಿರ್ಮಿಸಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಟ್ಟಡವನ್ನು ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಮಾ.19ರಂದು ಸಾಯಂಕಾಲ 4 ಗಂಟೆಗೆ ಉದ್ಘಾಟಿಸುವರು. ಶಾಸಕ ಗುರುಪಾದಪ್ಪ ನಾಗಮಾರಪಳ್ಳಿ ಅಧ್ಯಕ್ಷತೆ ವಹಿಸುವರು.
ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವೆ ಉಮಾಶ್ರೀ ಸೇರಿದಂತೆ ಜಿಲ್ಲೆಯ ಶಾಸಕರು, ಜಿಪಂ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ.
ಇದಕ್ಕೂ ಮುನ್ನ ಜಿಲ್ಲೆಯ ಪ್ರವಾಸೋದ್ಯಮದ ಪ್ರಚಾರ ಹಾಗೂ ಬೀದರ್ ಪರಂಪರೆ ಬಗ್ಗೆ ಅರಿವು ಮೂಡಿಸಲು ಜಿಲ್ಲಾ ರಂಗಮಂದಿರದಲ್ಲಿ ಮಾ.2.30ಕ್ಕೆ ಆಯೋಜಿಸುರವ ಕಾರ್ಯಕ್ರಮದಲ್ಲೂ ಕಲಾಂ ಭಾಗವಹಿಸಲಿದ್ದಾರೆನ್ನಲಾಗಿದೆ.
Advertisement