ಬೇಲೇಕೇರಿ ಅದಿರು ನಾಪತ್ತೆ: ಶಾಸಕ ನಾಗೇಂದ್ರ ಬಂಧನ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ್ಲಗಿ ಶಾಸಕ ನಾಗೇಂದ್ರ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ದಳ ಶುಕ್ರವಾರ ಸಂಜೆ ಬಂಧಿಸಿದೆ.
ಲೋಕಾಯುಕ್ತ
ಲೋಕಾಯುಕ್ತ

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ್ಲಗಿ ಶಾಸಕ ನಾಗೇಂದ್ರ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ದಳ ಶುಕ್ರವಾರ ಸಂಜೆ ಬಂಧಿಸಿದೆ.

ಲೋಕಾಯುಕ್ತ ಎಸ್. ಪಿ ಅಣ್ಣಿಗೇರಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕೂಡ್ಲಗಿ ಶಾಸಕ ನಾಗೇಂದ್ರರನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಲೋಕಾಯುಕ್ತ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಲೋಕಾಯುಕ್ತ ಮತ್ತಷ್ಟು ಗಣಿ ಕುಳಗಳ ಬಂಧನಕ್ಕೆ ಚಿಂತನೆ ನಡೆಸಿದೆ ಎನ್ನಲಾಗಿದ್ದು ಸದ್ಯದಲ್ಲಿಯೇ ಇನ್ನೂ ಮೂವರು ಶಾಸಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದೆ ಎನ್ನಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com