ಡಿಕೆ ರವಿ ನಿಗೂಢ ಸಾವು ಪ್ರಕರಣ: ಯಾರನ್ನೂ ರಕ್ಷಿಸುವುದಿಲ್ಲ ಎಂದ ಸಿದ್ದರಾಮಯ್ಯ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಸಾವಿಗೆ ಸಂಬಂಧಿಸಿದಂತೆ ಯಾವುದೇ ಸಂಗತಿಗಳನ್ನು ಮುಚ್ಚಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಸಾವಿಗೆ ಸಂಬಂಧಿಸಿದಂತೆ ಯಾವುದೇ ಸಂಗತಿಗಳನ್ನು ಮುಚ್ಚಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದು, ಈ ಸಾವಿನ ಹಿಂದೆ ಯಾರದಾದರೂ ಕೈವಾಡವಿದ್ದರೆ ಅವರನ್ನೂ ರಕ್ಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಸದನದಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸರಕಾರದ ನಿಲುವೇನೆಂಬುದನ್ನು ಸ್ಪಷ್ಟಪಡಿಸುವುದಾಗಿ ಅವರು ಮಾಧ್ಯಮಕ್ಕೆ ತಿಳಿಸಿದರು. ರವಿ ಸಾವಿನ ಪ್ರಕರಣವನ್ನು ಸಿಐಡಿ ಬದಲು ಸಿಬಿಐಗೆ ವಹಿಸಬೇಕೆಂದು ವಿರೋಧ ಪಕ್ಷ ಮತ್ತು ಸಾರ್ವಜನಿಕರಿಂದ ಒತ್ತಡ ಬರುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಲೇಬೇಕಾಗಿದೆ.

ಕಡೆಗೂ ಬಾಯಿಬಿಟ್ಟ ಸಿದ್ದು ಕೋಲಾರದ ಡಿಸಿಯಾಗಿದ್ದಾಗ ಡಿಕೆ ರವಿ ಭೂಗಳ್ಳರಿಗೆ ಸಿಂಹಸ್ವಪ್ನವಾಗಿದ್ದರು. ಕೆಲ ರಾಜಕಾರಣಿಗಳಿಂದ ಡಿಕೆ ರವಿಯವರಿಗೆ ಬೆದರಿಕೆಯ ಕರೆಗಳೂ ಬಂದಿದ್ದವು. ಈ ಹಿನ್ನೆಲೆಯಲ್ಲಿ ಕೋಲಾರದಿಂದ ಬೆಂಗಳೂರಿಗೆ ಅವರನ್ನು ಟ್ರಾನ್ಸ್‌ಫರ್ ಮಾಡಲಾಗಿತ್ತು. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕೂಡ ತೆರಿಗೆಗಳ್ಳರ ವಿರುದ್ಧ ರವಿ ತಿರುಗಿಬಿದ್ದಿದ್ದರು. ಅವರಿಂದ ಕೊಲೆ ಬೆದರಿಕೆ ಕರೆ ಬಂದಿದ್ದರಿಂದ ರವಿಯವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com