ಕುದುರೆಮುಖ ಕಾರ್ಖಾನೆಯಲ್ಲಿ ಕಬ್ಬಿಣದ ಸಲಾಕೆ ಬಿದ್ದು ಮೂವರು ಕಾರ್ಮಿಕರ ಸಾವು

ಕಬ್ಬಿಣದ ಸಲಾಕೆಗಳು ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಘಟನೆ...
ಕುದುರೆಮುಖ ಕಾರ್ಖಾನೆ
ಕುದುರೆಮುಖ ಕಾರ್ಖಾನೆ

ಮೂಡಿಗೆರೆ: ಕಬ್ಬಿಣದ ಸಲಾಕೆಗಳು ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಭಾನುವಾರ ಕುದುರೆಮುಖ ಕಬ್ಬಿಣದ ಅದಿರು ಕಾರ್ಖಾನೆಯಲ್ಲಿ ನಡೆದಿದೆ.

ಕಬ್ಬಿಣದ ಸಲಾಕೆಗಳನ್ನು ಜೋಡಿಸುತ್ತಿದ್ದ ವೇಳೆ ಈ ದುರ್ಘ‌ಟನೆ ಸಂಭವಿಸಿದ್ದು, ಸಲಾಕೆಗಳಡಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಇನ್ನೂ ಓರ್ವ  ಕಾರ್ಮಿಕ ಸಲಾಕೆಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.

ಮೃತ ಮೂವರೂ ಕಾರ್ಮಿಕರು ಉತ್ತರ ಪ್ರದೇಶ ಮೂಲದವರಾಗಿದ್ದು, ಅವರನ್ನು ಸುನಿಲ್‌,(25) ಶಂಕರ್‌ (25) ಹಾಗೂ ಕುಂದನ್‌  ಎಂದು ಗುರುತಿಸಲಾಗಿದೆ. ಈ ಸಂಬಂಧ ಕುದುರೆಮುಖ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com