ಜಿಲ್ಲಾ ಸುದ್ದಿ
ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ
ಕಿಲ್ಲರ್ ಬಿಎಂಟಿಸಿ ಗೆ ಮತ್ತೊಂದು ಬಲಿಯಾಗಿದ್ದು, ಕಾಮಾಕ್ಷಿ ಪಾಳ್ಯದಲ್ಲಿ ಬೈಕ್ ಮೇಲೆ ಬಸ್ ಹರಿದಿದೆ...
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಗೆ ಮತ್ತೊಂದು ಬಲಿಯಾಗಿದ್ದು, ಕಾಮಾಕ್ಷಿ ಪಾಳ್ಯದಲ್ಲಿ ಬೈಕ್ ಮೇಲೆ ಬಸ್ ಹರಿದಿದೆ.
ಸೀಗೇಹಳ್ಳಿ ಗೇಟ್ ನಿಂದ ಮಾರ್ಕೆಟ್ ಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಕಾಮಾಕ್ಷಿ ಪಾಳ್ಯದ ಧನಂಜಯ ಪ್ಯಾಲೆಸ್ ಬಳಿ ಇದ್ದ ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆಯೇ ಬೈಕ್ ಸವಾರ ಆಯತಪ್ಪಿ ಕೆಳಗೆ ಬಿದ್ದಿದ್ದು, ಬಸ್ ಆತನ ಮೇಲೆ ಹರಿದಿದೆ. ಹೀಗಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ.
ಇನ್ನು ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಬಿಎಂಟಿಸಿ ಬಸ್ ಚಾಲಕ ಮಂಜುನಾಥ್ ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್ಲದೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನು ಮೃತ ಬೈಕ್ ಸವಾರನ ಕುರಿತು ಇನ್ನೂ ಮಾಹಿತಿ ಲಭ್ಯವಾಗಿಲ್ಲ.