ಬೆಂಗಳೂರು ಪಿಯು ವಿದ್ಯಾರ್ಥಿನಿ ಕೊಲೆ: ಆರೋಪಿ ಮಹೇಶ್ ಬಂಧನ

ಬೆಂಗಳೂರಿನ ಪಿಯು ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಆರೋಪಿ ಮಹೇಶ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಮಹೇಶ್
ಆರೋಪಿ ಮಹೇಶ್
Updated on

ಬೆಂಗಳೂರು: ಬೆಂಗಳೂರಿನ ಪಿಯು ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಆರೋಪಿ ಮಹೇಶ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಿಯು ವಿದ್ಯಾರ್ಥಿನಿ ಗೌತಮಿಯನ್ನು ಗುಂಡಿಟ್ಟು ಕೊಲೆ ಮಾಡಿದ್ದ ಮಹೇಶ್ ಘಟನೆ ನಂತರ ಭೂಗತನಾಗಿದ್ದ. ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ. ನಾರಾಯಣಪುರದಲ್ಲಿರುವ ತನ್ನ ಅಕ್ಕನ ಮನೆಯಲ್ಲಿ ಆತ ತಲೆ ಮರೆಸಿಕೊಂಡಿದ್ದ. ಖಚಿತ ಮಾಹಿತಿ ಪಡೆದ ತನಿಖಾಧಿಕಾರಿಗಳು ಮಹೇಶ್ ನನ್ನು ಬಂಧಿಸಿದ್ದಾರೆ.

ಜತೆಗೆ ಆರೋಪಿ ಹತ್ಯೆಗೆ ಬಳಸಿದ್ದ ನಾಡ ಪಿಸ್ತೂಲನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿ ಮಹೇಶ್ ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com