ಕೋರ್ಟ್ ಆವರಣದಲ್ಲೇ ಬಂಧನ

ನ್ಯಾಯಾಯಕ್ಕೆ ಶರಣಾಗಲು ಬುಧವಾರ ಆಗಮಿಸಿದ್ದ ಕೊಲೆ ಆರೋಪಿಯನ್ನು ಪೊಲೀಸರು ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ರಾಮನಗರ: ನ್ಯಾಯಾಲಯಕ್ಕೆ ಶರಣಾಗಲು ಬುಧವಾರ ಆಗಮಿಸಿದ್ದ ಕೊಲೆ ಆರೋಪಿಯನ್ನು ಪೊಲೀಸರು ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ.

ಇಲ್ಲಿನ ಬೀಡಿ ಕಾಲೋನಿಯ ನಿವಾಸಿ ಗೋರು ಬಂಧಿತ ಆರೋಪಿ. ಮೇ 3ರಂದು ರೋಹಿದ್ (25) ಎಂಬ ಯುವಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಗೋರು ಪ್ರಮುಖ ಆರೋಪಿಯಾಗಿದ್ದ. ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಇದನ್ನು ತಿಳಿದ ಗೋರು ನ್ಯಾಯಾಲಯಕ್ಕೆ ಶರಣಾಗಲು ಮೈಸೂರಿನ ವಕೀಲರೊಂದಿಗೆ ನ್ಯಾಯಾಲಯದ ಆವರಣ ಪ್ರವೇಶಿಸುತ್ತಿದ್ದಂತೆ, ಸಿಪಿಐ ಸುಬ್ರಹ್ಮಣ್ಯ ನೇತೃತ್ವದ ಪೊಲೀಸರ ತಂಡ ಆರೋಪಿ ಬಂಧನಕ್ಕೆ ಮುಂದಾಗಿದ್ದಾರೆ.

ಈ ವೇಳೆ ಆರೋಪಿ ಪರ ವಕೀಲರು ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯೆ ಪ್ರವೇಶಿಸಿದ ಸ್ಥಳೀಯ ವಕೀಲರು ಆರೋಪಿ ಬಂಧನಕ್ಕೆ ಅನುವು ಮಾಡಿ ಕೊಟ್ಟರು. ಬಂಧಿತ ನನ್ನು ವಿಚಾರಣೆಗೊಳ ಪಡಿಸಿದ ನಂತರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com