ಬೆಂಗಳೂರು: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ಫಲಿತಾಂಶ ಮುಂದಿನ ವಾರ ಪ್ರಕಟಗೊಳ್ಳಲಿದೆ.
ಮೇ 11 ರಂದು ಎಸ್ಎಸ್ಎಲ್ಸಿ ಫಲಿತಾಂಶ ಮತ್ತು 14 ರಂದು ಪಿಯು ಫಲಿತಾಂಶ ಪ್ರಕಟಗೊಳ್ಳುವ ಸಂಭವವಿದೆ. ಇದಕ್ಕಾಗಿ ಪ್ರೌಢಶಿಕ್ಷಣಾ ಪರೀಕ್ಷಾ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಕಾದು ಕುಳಿತಿದೆ. ಈಗಾಗಲೇ ಮೌಲ್ಯಮಾಪನ, ಅಂಕ ದಾಖಲು ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಶಿಕ್ಷಣ ಇಲಾಖೆ ಪ್ರಕಟ ಮಾಡಿ ಎಂದು ಕೂಡಲೇ ಫಲಿತಾಂಶ ಬಹಿರಂಗಗೊಳ್ಳಲಿದೆ. ಎಸ್ಎಸ್ಎಲ್ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಒಂದು ವಾರ ವಿಳಂಬವಾಗಿದೆ.
ಹಾಗೆಯೇ ಸಿಇಟಿ ಕೂಡ ಮೇ 12 ಮತ್ತು 13ರಂದು ನಡೆಯಲಿದೆ. ಆದಾಗ್ಯೂ ಸಿಇಟಿ ಫಲಿತಾಂಶದಲ್ಲಿ ಯಾವುದೇ ವಿಳಂಬವಿಲ್ಲ, ಮೇ ಕೊನೆಯ ವಾರದಲ್ಲಿಯೇ ಫಲಿತಾಂಶ ಪ್ರಕಟಿಸುತ್ತೇವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಎಸ್.ಎನ್.ಗಂಗಾಧರಯ್ಯ ತಿಳಿಸಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಸಂಭಾಷಣೆ: ಸಿಇಟಿ ಬರೆಯುತ್ತಿರುವ ವಿದ್ಯಾರ್ಥಿಗಳ ಗೊಂದಲ ನಿವಾರಣೆಗಾಗಿ ಮೇ 8ರಂದು ಚಂದನ ವಾಹಿನಿಯಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಪ್ರಸಾರವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಸುಷ್ಮಾ ಗೋಡಬೋಲೆ, ಆಡಳಿತಾಧಿಕಾರಿ ಎಸ್.ಎನ್.ಗಂಗಾಧ ರಯ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 8 ರಿಂದ 9ರವರೆಗೆ ಕಾರ್ಯಕ್ರಮ ಪ್ರಸಾರವಾಗುತ್ತದೆ. ದೂ.ಸಂ- 080-23542599, 23542699.
Advertisement