ಬೆಂಗಳೂರು: ತುಮಕೂರಿನಲ್ಲಿ ಅಕ್ರಮ ಮರಳು ಸಾಗಣೆ ಕುರಿತು ಜಿಲ್ಲಾಧಿಕಾರಿ ತೆಗೆದುಕೊಂಡಿರುವ ಕ್ರಮದ ಕುರಿತಾದ ವರದಿಯನ್ನು ಲೋಕಾಯುಕ್ತ ಸೋಮವಾರ ಬಿಡುಗಡೆಗೊಳಿಸಿದೆ.
ತುಮಕೂರು ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಮಾಡುತ್ತಿರುವುದಾಗಿ ಆರೋಪಿಸಿ ಸಿದ್ದಲಿಂಗೇಗೌಡ ಎಂಬುವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಇದಕ್ಕೆ ಸಂಬಂಧಿಸಿ ತುಮಕೂರು ಜಿಲ್ಲಾಧಿಕಾರಿಗೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ವರದಿ ಸಲ್ಲಿಸುವಂತೆ 2014ರ ಮೇ 8ರಂದು ಲೋಕಾಯುಕ್ತ ಸೂಚಿಸಿತ್ತು.
ಲೋಕಾಯುಕ್ತದ ಆದೇಶದಂತೆ ಜಿಲ್ಲಾಧಿಕಾರಿಗಳು ಅಕ್ರಮ ಮರಳು ಸಾಗಣೆ ನಿಯಂತ್ರಿಸುವಲ್ಲಿ ಮತ್ತು ಈವರೆಗೂ ಜಿಲ್ಲಾಧಿಕಾರಿ ತೆಗೆದುಕೊಂಡಿರುವ ಕ್ರಮದ ಕುರಿತು ಲೋಕಾಯುಕ್ತಗೆ ವರದಿ ಸಲ್ಲಿಸಿದ್ದಾರೆ.
Advertisement