ಬೆಂಗಳೂರಿನಲ್ಲಿ ಧಾರಾಕಾರ ಮಳೆ, ಕುಸಿದು ಬಿದ್ದ ಜೆಡಿಎಸ್ ಪೆಂಡಾಲ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗ ಮೆಜೆಸ್ಟಿಕ್ ಸೇರಿದಂತೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗ ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

ಮೆಜೆಸ್ಟಿಕ್, ಗಾಂಧಿನಗರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ವಾಹನ ಸವಾರರು ಮನೆ ತಲುಪಲು ಪರದಾಡುತ್ತಿದ್ದಾರೆ.

ಶಾಂತಿನಗರ, ಶೇಷಾದ್ರಿಪುರ, ಬಾಪೂಜಿನಗರ, ಈಜಿಪುರ, ಮಾಗಡಿರಸ್ತೆ, ಇಂದಿರಾನಗರ, ಚಾಮರಾಜಪೇಟೆ, ರಾಜಾಜಿನಗರ, ಕೆ.ಆರ್,ವೃತ್ತ, ಬಸವೇಶ್ವರ ನಗರ, ಸೇರಿದಂತೆ ನಗರದ ಬಹುತೇಕ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ.

ರಸ್ತೆಗಳು ಹಳ್ಳಗಳಂತಾದರೆ, ತಗ್ಗು ಪ್ರದೇಶಗಳು ಕೆರೆಗಳಾಗಿದ್ದು, ರಸ್ತೆ ಯಾವುದು, ಹೊಂಡ ಯಾವುದು ಎಂದು ಗುರುತಿಸಲು ಸಾಧ್ಯವಾಗದೆ ವಾಹನ ಸವಾರರು ಪರದಾಡುತ್ತಿದ್ದಾರೆ.

ಕುಸಿದು ಬಿದ್ದ ಜೆಡಿಎಸ್ ಪೆಂಡಾಲ್:
ನಗರದ ಫ್ರೀಡಂ ಪಾರ್ಕ್ ನಲ್ಲಿ  ನಾಳೆ ನಡೆಯಬೇಕಿರುವ ಜೆಡಿಎಸ್ ಅಹವಾಲು ಸ್ವೀಕಾರ ಸಮಾರಂಭಕ್ಕಾಗಿ ಬೃಹತ್ ಪೆಂಡಾಲ್ ಹಾಕಲಾಗಿತ್ತು. ಧಾರಾಕಾರ ಸುರಿದ ಪರಿಣಾಮ ಪೆಂಡಾಲ್ ಕುಸಿದುಬಿದ್ದ ಘಟನೆ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com