ಮಾದಕವಸ್ತು ಮಾರಾಟ ಮೂವರ ಬಂಧನ

ಯಶವಂತಪುರದಲ್ಲಿ ಮಾದಕ ವಸ್ತು ಚರಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 4 ಕೆ.ಜಿ. ಚರಸ್ ವಶಪಡಿಸಿಕೊಂಡಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಯಶವಂತಪುರದಲ್ಲಿ ಮಾದಕ ವಸ್ತು ಚರಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 4 ಕೆ.ಜಿ. ಚರಸ್ ವಶಪಡಿಸಿಕೊಂಡಿದ್ದಾರೆ.

ಹಾಸನ ಜಿಲ್ಲೆಯ ಬೇಲೂರಿನ ರಘು (34), ದಾಸರಕೊಪ್ಪಲು ಗ್ರಾಮದ ಕಿರಣ್ (29) ಹಾಗೂ ಹಳೇ ಕೊಪ್ಪಲು ಪ್ರದೇಶದ ಹೇಮಂತ್ ಕುಮಾರ್ (34) ಬಂಧಿತರು. ಇವರಿಂದ ರು.8 ಲಕ್ಷ ಮೌಲ್ಯದ 4 ಕೆ.ಜಿ. ಚರಸ್ 3 ಮೊಬೈಲ್ ಫೋನ್ ಹಾಗೂ ರು.900 ನಗದು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಾಗೂ ಐಟಿಬಿಟಿ ಉದ್ಯೋಗಿಗಳಿಗೆ ಚರಸ್ ಪೂರೈಸುತ್ತಿದ್ದರು. ಯಶವಂತಪುರದಲ್ಲಿರುವ ಸ್ಟಾರ್ ಲಾಡ್ಜ್ ನ ಕೊಠಡಿಯಲ್ಲಿ ಚರಸ್ ಇರಿಸಿಕೊಂಡು ಮಾರಾಟಕ್ಕೆ ಯತ್ನಿಸುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದರು. ಆಂಧ್ರಪ್ರದೇಶದ ವಿಶಾಖ ಪಟ್ಟಣದಲ್ಲಿ ಕೊಂಡರಾಜ ಎಂಬಾತನಿಂದ ಚರಸ್ ನಗರಕ್ಕೆ ತಂದು ಎಲ್ಲರೂ ಮಾರಾಟ ಮಾಡುತ್ತಿದ್ದೆವೆಂದು ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com