ಬೀದರ್: ಗ್ರಾಪಂ ಚುನಾವಣೆಯಲ್ಲಿ ಹಂಚಲು ಸಂಗ್ರಹಿಸಿದ್ದ ಅಕ್ರಮ ಸಾರಾಯಿ ಭಟ್ಟಿ ಹಾಗೂ ಮಾರಾಟ ಕೇಂದ್ರಗಳ ಕುರಿತು ಮಕ್ಕಳೇ ಪೊಲೀಸರಿಗೆ ಮಾಹಿತಿ ನೀಡಿ ದಾಳಿ ಮಾಡಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮುಂಜಾಗ್ರತೆ ಕ್ರಮವಾಗಿ ಪೊಲೀಸ್, ಲಾಟರಿ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಅದರಂತೆ ಮೇ 24ರಂದು ಬದಗಲ್ ತಾಂಡಾಕ್ಕೂ ಭೇಟಿ ನೀಡಿ ಪರಿಶೀಲಿಸುವ ವೇಳೆ ಮಕ್ಕಳು ಪೊಲೀಸರಿಗೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯ ಹಾಗೂ ಕಳ್ಳಭಟ್ಟಿ ಅಡ್ಡೆಗಳ ಕುರಿತು ಮಾಹಿತಿ ನೀಡಿದ್ದಾರೆ.
ಅಲ್ಲದೇ ಪೊಲೀಸರ ಜತೆಗೂಡಿ ಕಳ್ಳಭಟ್ಟಿ ಸಾರಾಯಿ ನಾಶಗೊಳಿಸಿದ್ದಾರೆ. ಇಡೀ ಗ್ರಾಮದಲ್ಲಿ ಕಳ್ಳಭಟ್ಟಿ ವ್ಯವಹಾರ ನಡೆಯುತ್ತಿದ್ದುದನ್ನು ಕಂಡು ಅಧಿಕಾರಿಗಳು ಹೌಹಾರಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement