ಬೆಂಗಳೂರು: ಪಿಯುಸಿ ಫಲಿತಾಂಶ ಪ್ರಕಟಣೆ ವೇಳೆ ಗೊಂದಲಗಳು ಉಂಟಾದ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸುಷ್ಮಾ ಗೋಡಬೊಲೆಯವರಿಗೆ ಸರ್ಕಾರ ನೋಟಿಸ್ ಜಾರಿ ಮಾಡಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜ್ ಕುಮಾರ್ ಕತ್ರಿ ಅವರು ನೋಟಿಸ್ ಜಾರಿ ಮಾಡಿದ್ದು, ಸ್ಪಷ್ಟನೆ ನೀಡಬೇಕೆಂದು ಸೂಚಿಸಿದ್ದಾರೆ. ಮೇ 18ರಂದು ಪಿಯುಸಿ ಫಲಿತಾಂಶ ಪ್ರಕಟಗೊಂಡ ಬಳಿಕ ಸಾಕಷ್ಟು ಗೊಂದಲ ಉಂಟಾಗಿತ್ತು.
ಸರ್ಕಾರಿ ವೆಬ್ಸೈಟ್ಗಳಲ್ಲಿ ಒಂದು ರೀತಿಯ ಫಲಿತಾಂಶ ಪ್ರಕಟಗೊಂಡರೆ, ಖಾಸಗಿ ವೆಬ್ಸೈಟ್ನಲ್ಲಿ ಮತ್ತೊಂದು ರೀತಿಯ ಫಲಿತಾಂಶ ಬಂದಿತ್ತು. ಇದರಿಂದ ಸಾಕಷ್ಟು ಗೊಂದಲ ಉಂಟಾಯಿತಲ್ಲದೇ, ಗೊಂದಲಕ್ಕೆ ಬಿದ್ದ ಪೋಷಕರು ವಿದ್ಯಾರ್ಥಿಗಳನ್ನು ನಿಭಾಯಿಸುವಲ್ಲಿ ಇಲಾಖೆ ವಿಫಲವಾಗಿ, ಪ್ರತಿಭಟನೆ ಬಿಸಿ ಎದುರಿಸಿತ್ತು. ಈ ನಡುವೆ ಸರ್ಕಾರ ಇಲಾಖೆಯ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ಕೇಳಿದೆ.
Advertisement