ದಾರಿ ತಪ್ಪಿ ಅಡ್ಡಾಡಿದರೆ ದಂಡ

ಮೆಜೆಸ್ಟಿಕ್ ಬಸ್ ನಿಲ್ದಾಣ ಪ್ರವೇಶ ದ್ವಾರ ಸೇರಿದಂತೆ ವಾಹನ ದಟ್ಟಣೆ ತೀವ್ರವಾಗಿರುವ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ರಸ್ತೆ ದಾಟುವ ಅಶಿಸ್ತಿನ ಪಾದಚಾರಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು ಮಂಗಳ ವಾರ 30 ಪ್ರಕರಣಗಳನ್ನು ದಾಖಲಿಸಿದ್ದಾರೆ...
ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ (ಸಂಗ್ರಹ ಚಿತ್ರ)
ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣ ಪ್ರವೇಶ ದ್ವಾರ ಸೇರಿದಂತೆ ವಾಹನ ದಟ್ಟಣೆ ತೀವ್ರವಾಗಿರುವ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ರಸ್ತೆ ದಾಟುವ ಅಶಿಸ್ತಿನ ಪಾದಚಾರಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು ಮಂಗಳ ವಾರ 30 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಉಪ್ಪಾರಪೇಟೆ ಸಂಚಾರ ಠಾಣೆ ವ್ಯಾಪ್ತಿಯಲ್ಲಿ 18, ಚಿಕ್ಕಪೇಟೆ ವ್ಯಾಪ್ತಿಯಲ್ಲಿ 4, ಬನಶಂಕರಿ ವ್ಯಾಪ್ತಿಯಲ್ಲಿ 8 ಮಂದಿಯ ವಿರುದಟಛಿ ಪ್ರಕರಣ ದಾಖಲಿಸಿದರು. ಸಂಚಾರ ನಿಯಮ ಉಲ್ಲಂಘಿಸಿದವರು ಸಂಚಾರ ನ್ಯಾಯಾಲಯದಲ್ಲಿ ರು.100 ದಂಡ ಪಾವತಿಸಿದರು. ಕೆಂಪೇಗೌಡ ಬಸ್ ನಿಲ್ದಾಣ ಪ್ರವೇಶ ದ್ವಾರ, ಚಿಕ್ಕಪೇಟೆ ಹಾಗೂ ಬನಶಂಕರಿ ಬಸ್ ನಿಲ್ದಾಣದ ಬಳಿ ಬಸ್‍ಗಳು ಹಾಗೂ ಇತರೆ ವಾಹನಗಳ ಓಡಾಟ ಹೆಚ್ಚಿರುವ ಕಡೆ ಸ್ಕೈವಾಕರ್ ಹಾಗೂ ಅಂಡರ್‍ಪಾಸ್ ವ್ಯವಸ್ಥೆ ಇದೆ. ಆದರೂ, ಪಾದಚಾರಿಗಳು ರಸ್ತೆ ಮೇಲೆ ಓಡಾಡುತ್ತಿದ್ದ ಕಾರಣ ಪ್ರಕರಣ ದಾಖಲಿಸಲಾಯಿತು.

ಇತ್ತೀಚೆಗೆ ಕೆಂಪೇಗೌಡ ಬಸ್ ನಿಲ್ದಾಣದ ಪ್ರವೇಶ ದ್ವಾರದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಮೌಂಟ್ ಕಾರ್ಮೆಲ್ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದಳು. ಇಂಥ ಘಟನೆ ಮರುಕಳಿಸುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕರು ಪಾದಚಾರಿ ಮಾರ್ಗದಲ್ಲೇ ಸಂಚರಿಸುವಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಅ„ಕಾರಿ ಹೇಳಿದರು. ಕಳೆದ ಮೂರು ತಿಂಗಳಲ್ಲಿ ಅಡ್ಡಾದಿಡ್ಡಿಯಾಗಿ ರಸ್ತೆ ದಾಟಿದ ಒಟ್ಟು 1,608 ಪಾದಚಾರಿಗಳ ವಿರುದ್ಧ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com