ಕೊಪ್ಪಳ: ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಸಚಿವ ಶಿವರಾಜ್ ತಂಗಡಗಿ ಆಪ್ತ ಹನುಮೇಶ್ ನಾಯಕ್ ಸೇರಿದಂತೆ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಬುಧವಾರ ಕೋರ್ಟ್ ವಜಾಗೊಳಿಸಿದೆ.
ಆರೋಪಿಗಳಾದ ಹನುಮೇಶ್ ನಾಯಕ್, ಬಾಳನಗೌಡ ಹಾಗೂ ಪರಶುರಾಮ್ ಜಾಮೀನು ಕೋರಿ ಕೊಪ್ಪಳ ಜಿಲ್ಲಾ ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ಜಡ್ಜ್ ಕೆ.ನಾಗರತ್ನ ಅವರು, ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.
ಗ್ರಾಮದ ಸಮಸ್ಯೆಗಳನ್ನು ಮಾಧ್ಯಮದ ಮುಂದೆ ಹೇಳಿಕೊಂಡಿದ್ದ ಗಂಗಾವತಿ ತಾಲೂಕಿನ ಕನಕಾಪುರ ಗ್ರಾಮದ ನಿವಾಸಿ ಯಲ್ಲಾಲಿಂಗನನ್ನು ಕಳೆದ ಜನವರಿಯಲ್ಲಿ ಅಮಾನುಷವಾಗಿ ಕೊಲೆ ಮಾಡಲಾಗಿತ್ತು. ಯಲ್ಲಾಲಿಂಗ ಕೊಲೆ ನಂತರ ಜಿಲ್ಲೆಯಲ್ಲಿ ಸಾಕಷ್ಟು ಹೋರಾಟಗಳು ನಡೆದಿದ್ದವು. ಬಳಿಕ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು.
Advertisement