ಇದೇ ವೇಳೆ ಮೈದಾನದಲ್ಲಿ ನಿಲುಗಡೆ ಮಾಡಿದ್ದ ಕಸ ಸಾಗಿಸುವ ಟಿಪ್ಪರ್ ಲಾರಿ ಚಾಲಕ, ವಾಹನವನ್ನು ಮೈದಾನದಿಂದ ಹೊರ ತೆಗೆಯಲು ಹಿಮ್ಮುಖವಾಗಿ ತಿರುವು ತೆಗೆದುಕೊಳ್ಳುತ್ತಿದ್ದ. ಇತ್ತ ಗಾಳಿಪಟ ಹಾರಿಸುತ್ತಾ ಕಿಶೋರ್, ಕಸದ ಲಾರಿ ಹತ್ತಿರಕ್ಕೆ ಹೋಗಿದ್ದಾನೆ. ಆದರೆ ವಿದ್ಯಾರ್ಥಿಯನ್ನು ಗಮನಿಸದ ಚಾಲಕ, ವಾಹನನ್ನು ಹಿಂದಕ್ಕೆ ತೆಗೆದುಕೊಂಡಾಗ ಬಾಲಕನಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಕಿಶೋರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.