ಟಿಪ್ಪು ಒಬ್ಬ ದೇಶಭಕ್ತ: ಸಿದ್ದರಾಮಯ್ಯ

ಟಿಪ್ಪು ಸುಲ್ತಾನ್ ದೇಶಭಕ್ತ. ಆ ಕಾರಣಕ್ಕಾಗಿ ರಾಜ್ಯ ಸರ್ಕಾರ ಅವರ ಜಯಂತಿ ಆಚರಿಸುತ್ತಿದೆ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ...
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)

ಬೆಂಗಳೂರು: ಟಿಪ್ಪು ಸುಲ್ತಾನ್ ದೇಶಭಕ್ತ. ಆ ಕಾರಣಕ್ಕಾಗಿ ರಾಜ್ಯ ಸರ್ಕಾರ ಅವರ ಜಯಂತಿ ಆಚರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಾಗೆ ನೋಡಿದರೆ, ಬ್ರಿಟಿಷರ ವಿರುದ್ಧ ಮೊದಲ ಸಂಘಟಿತ ಹೋರಾಟ ನಡೆಸಿದ್ದೇ ಮೈಸೂರು ರಾಜ್ಯ.

ಇಂಥ ದೇಶಭಕ್ತನ ಜಯಂತಿಯನ್ನು ರಾಜ್ಯ ಸರ್ಕಾರ ಆಚರಿಸುತ್ತಿದೆ. ಆಧರೆ, ಆರ್ ಎಸ್ಎಸ್ ನವರಿಗೆ ಇದು ಇಷ್ಟವಿಲ್ಲ. ಹೀಗಾಗಿ ವಿರೋಧಿಸುತ್ತಾರೆ. ದೇಶಭಕ್ತನ ಜಯಂತಿಯನ್ನು ಆಚರಿಸುವುದರಲ್ಲಿ ತಪ್ಪೇನಿದೆ? ಅವರು ಪ್ರತಿಭಟಿಸುತ್ತಾರೆ ಎಂಬ ಕಾರಣಕ್ಕೆ ಬಿಡಲಾಗುತ್ತದೆಯೇ ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com