ನಿಂತ ನೆಲವೇ ಬಾಯ್ಬಿಟ್ಟು ನುಂಗಲು ಯತ್ನಿಸಿತು

ಮೊಬೈಲ್‍ನಲ್ಲಿ ಮಾತನಾಡುತ್ತ ನಿಂತಿದ್ದ ವ್ಯಕ್ತಿಯೊಬ್ಬರಿಗೆ ದಿಢೀರ್ ಭೂಕಂಪನದ ಅನುಭವ...
ಭೂಮಿ ಕುಸಿದ ಪರಿಣಾಮ ಸುಮಾರು 20 ಅಡಿ ಆಳದ ಗುಂಡಿಗೆ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ರಕ್ಷಿಸುತ್ತಿರುವುದು...
ಭೂಮಿ ಕುಸಿದ ಪರಿಣಾಮ ಸುಮಾರು 20 ಅಡಿ ಆಳದ ಗುಂಡಿಗೆ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ರಕ್ಷಿಸುತ್ತಿರುವುದು...
Updated on
ಬೆಂಗಳೂರು: ಮೊಬೈಲ್‍ನಲ್ಲಿ ಮಾತನಾಡುತ್ತ ನಿಂತಿದ್ದ ವ್ಯಕ್ತಿಯೊಬ್ಬರಿಗೆ ದಿಢೀರ್ ಭೂಕಂಪನದ ಅನುಭವ! ಹೌದು. 
ನಗರದ ಸಿವಿಲ್ ಕೋರ್ಟ್ ಮುಂಭಾಗ ಬೈಕ್ ನಿಲ್ಲಿಸಿ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದ ವೇಳೆ ಭೂಮಿ ಕುಸಿದ ಪರಿಣಾಮ ಏತನ್ಮಧ್ಯೆ ವ್ಯಕ್ತಿಯೊಬ್ಬರು ಸುಮಾರು 20 ಅಡಿ ಆಳದ ಗುಂಡಿಗೆ ಬಿದ್ದಿದ್ದಾರೆ. 
ತಕ್ಷಣ ಪಕ್ಕದಲ್ಲೇ ಇದ್ದ ಜನರು ಧಾವಿಸಿ ಬಂದು ಗುಂಡಿಯಿಂದ ಮೇಲೆತ್ತಿದ್ದು, ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಗುಂಡಿಗೆ ಬಿದ್ದಿರುವ ವ್ಯಕ್ತಿಯನ್ನು ಚಾಮರಾಜಪೇಟೆ ನಿವಾಸಿ ನಂದಕುಮಾರ್ ಎಂದು ತಿಳಿದುಬಂದಿದೆ. ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 
ಕೋರ್ಟ್ ಮುಂಭಾಗ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಾರಣ ಸುತ್ತಮುತ್ತಲ ಪ್ರದೇಶ ಜಾಗ ಸಡಿಲಗೊಂಡಿದೆ. ಅಲ್ಲದೆ ಕಳೆದ ಮೂರು ದಿನಗಳಿಂದ ವಿಪರೀತ ಮಳೆ ಸುರಿಯುತ್ತಿರುವುದು ಭೂಮಿ ಮತ್ತಷ್ಟು ಕುಸಿದಿರುವುದು ಸಹ ಘಟನೆ ಜರುಗಲು ಕಾರಣವಾಗಿದೆ. 
ಈ ಸಂಬಂಧ ಬಿಎಂಆರ್‍ಸಿಎಲ್ ವಿರುದ್ಧ ಆರ್‍ಟಿಐ ಕಾರ್ಯಕರ್ತ ನರಸಿಂಹಮೂರ್ತಿ ಅವರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com