ಹೇಳಿಕೆ ಹಿಂಪಡೆದ ಪ್ರತಾಪ್ ಸಿಂಹ

ಟಿಪ್ಪುವಿನ ಕ್ರೌರ್ಯಕ್ಕೆ ಕೊಡಗಿನವರ ಬದಲು ಕುರುಬರು ತುತ್ತಾಗಿದ್ದರೆ ಟಿಪ್ಪು ಜಯಂತಿ ಆಚರಿಸುತ್ತಿದ್ದಿರಾ ಎಂಬ ಹೇಳಿಕೆಯನ್ನು ಹಿಂಪಡೆಯುವುದಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ...
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ (ಸಂಗ್ರಹ ಚಿತ್ರ)
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ (ಸಂಗ್ರಹ ಚಿತ್ರ)
Updated on

ಮೈಸೂರು: ಟಿಪ್ಪುವಿನ ಕ್ರೌರ್ಯಕ್ಕೆ ಕೊಡಗಿನವರ  ಬದಲು ಕುರುಬರು ತುತ್ತಾಗಿದ್ದರೆ ಟಿಪ್ಪು ಜಯಂತಿ ಆಚರಿಸುತ್ತಿದ್ದಿರಾ ಎಂಬ ಹೇಳಿಕೆಯನ್ನು ಹಿಂಪಡೆಯುವುದಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಟಿಪ್ಪುವಿನ ಆಡಳಿತ ದೌರ್ಜನ್ಯ, ಲೂಟಿ, ಕಗ್ಗೊಲೆಗಳಿಂದ ಕೂಡಿತ್ತು ಎನ್ನುವುದಕ್ಕೆ ಇತಿಹಾಸದ ಪುಟಗಳು ಸಾಕ್ಷಿಯಾಗಿ ನಿಂತಿವೆ. ಅಲ್ಪಸಂಖ್ಯಾತರ ಮತಗಳ ಮೇಲೆ ಕಣ್ಣಿರುವ ಸಿಎಂ ಟಿಪ್ಪು ಜಯಂತಿಗೆ ಮುಂದಾದರು. ಸಿದ್ದರಾಮಯ್ಯನವರ ಹೃದಯಕ್ಕೆ ನಾಟಿ ನಿರ್ಧಾರವನ್ನು ಬದಲಿಸಿಕೊಳ್ಳಲಿ ಎನ್ನುವ ಕಾರಣಕ್ಕೆ ನಾನು ಈ ಹೇಳಿಕೆ ನೀಡಿದ್ದೆ .

ಹೀಗಾಗಿ ನನ್ನ ಹೇಳಿಕೆ ಅಥವಾ ಲೇಖನ ಯಾವುದೋ ಒಂದು ಸಮುದಾಯದ ವಿರುದ್ಧವಲ್ಲ ಎಂಬುದು ಮೇಲ್ನೋಟಕ್ಕೆ ಅರ್ಥವಾಗುತ್ತದೆ. ಆದರೂ ಯಾರಿ ಗಾದರೂ ಇದರಿಂದ ನೋವಾಗಿದ್ದರೆ ನನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com