ಆರೋಪಗಳಲ್ಲಿ ಹುರುಳಿಲ್ಲ, ರಾಜೀನಾಮೆ ನೀಡಲ್ಲ: ನ್ಯಾ. ಸುಭಾಷ್ ಬಿ.ಅಡಿ

ನನ್ನ ವಿರುದ್ಧ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು...
ಸುಭಾಷ್ ಬಿ.ಅಡಿ
ಸುಭಾಷ್ ಬಿ.ಅಡಿ

ಬೆಂಗಳೂರು: ನನ್ನ ವಿರುದ್ಧ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಉಪಲೋಕಾಯುಕ್ತ ನ್ಯಾ. ಸುಭಾಷ್ ಬಿ.ಅಡಿ ಸ್ಪಷ್ಟಪಡಿಸಿದ್ದಾರೆ.

ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದೂ ಇಲ್ಲ ಎಂದು ಹೇಳಿದ ಅವರು ನಿವೃತ್ತ ಉಪಲೋಕಾಯುಕ್ತ ಮಜಗೆ ತಮ್ಮ ವಿರುದ್ಧ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಮತ್ತು ಕಾಂಗ್ರೆಸ್ ಶಾಸಕರು ತಮ್ಮ ಪದಚ್ಯುತಿಗೆ ಯಾವ ಆಧಾರದ ಮೇಲೆ ಸಹಿ ಸಂಗ್ರಹ ಮಾಡುತ್ತಿದ್ದಾರೆ ಎಂಬ ಬಗ್ಗೆ ನನಗೆ ಆಶ್ಚರ್ಯ ಉಂಟಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿ ಮೂಲದ ವೈದ್ಯೆ ಡಾ.ಶೀಲಾ ಪ್ರಕರಣದ ಕೇಸ್ ನನ್ನ ಬಳಿಗೆ ಬಂದಿದ್ದರಿಂದ ಅದರ ಕಡತ ಪರಿಶೀಲಿಸಲಾಯಿತೆ ಹೊರತು ನಾನು ಮಜಗೆ ಅವರ ಕಾರ್ಯವ್ಯಾಪ್ತಿಯೊಳಗೆ ಮೂಗು ತೂರಿಸಿಲ್ಲ. ನನ್ನ ಅಳಿಯನ ವಿರುದ್ಧ 2012ರಲ್ಲಿ ಖಾಸಗಿ ದೂರು ದಾಖಲಾಗಿತ್ತು. ಆ ಸಂದರ್ಭದಲ್ಲಿ ನಾನು ನ್ಯಾಯಮೂರ್ತಿ ಸ್ಥಾನದಲ್ಲಿದ್ದೆ. ಆದರೂ ಪೊಲೀಸ್ ತನಿಖೆಯಲ್ಲಿ ಮಧ್ಯ ಪ್ರವೇಶಿಸಿರಲಿಲ್ಲ. ತಮ್ಮ ವಿರುದ್ಧದ ಖಾಸಗಿ ದೂರಿನ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ನನ್ನ ಅಳಿಯ ಇಡೀ ಪ್ರಕರಣದಿಂದ ದೋಷಮುಕ್ತ ಹೊಂದಿದ್ದರು ಎಂದು ಸ್ಪಷ್ಟ ಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com