ಬೆಂಗಳೂರು ಗ್ರಾಮಾಂತರ: ಮೊಬೈಲ್ ಬ್ಯಾಟರಿ ಚಾರ್ಜಿಂಗ್ ಮಾಡುತ್ತಿದ್ದ ವೇಳೆ ಮೊಬೈಲ್ ಸ್ಫೋಟಗೊಂಡ ಪರಿಣಾಮ ಬಾಲಕನೋರ್ವನ ಕಣ್ಣಿಗೆ ತೀವ್ರ ಹಾನಿಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯ ಪುರದಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ 14 ವರ್ಷದ ಬಾಲಕ ಧನ್ ಸಿಂಗ್ ಕಣ್ಣಿಗೆ ತೀವ್ರ ಹಾನಿಯಾಗಿದೆ. ಧನ್ ಸಿಂಗ್ ನ ಎಡಗಣ್ಣು ಸಂಪೂರ್ಣ ಛಿದ್ರಗೊಂಡಿದ್ದು, ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಸ್ತುತ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಯ ಮೂಲಗಳ ಪ್ರಕಾರ ಧನ್ ಸಿಂಗ್ ನ ಎಡಗಣ್ಣು ಚಿಕಿತ್ಸೆ ನೀಡಲಾಗದಷ್ಟು ಹಾನಿಗೊಳಗಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement