ಗೌರಿಬಿದನೂರು: ಲಾರಿ ಮತ್ತು ಸ್ಕೂಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಮೃತಪಟ್ಟಿರುವ ಘಟನೆ ಗೌರಿಬಿದನೂರಿನಲ್ಲಿ ನಡೆದಿದೆ.
ಗೌರಿಬಿದನೂರಿನ ತೊಂಡೇಬಾವಿ ಹೋಬಳಿಯ ಬೇವಿನ ಹಳ್ಳಿ ಬಳಿ ಈ ಅಫಘಾವಾಗಿದ್ದು, ದ್ವಿಚಕ್ರ ವಾಹನ ಸವಾರ ರವಿಕುಮಾರ್ ರಾವ್(31) ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಮಹಾದೇವಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡಿದ್ದ ಮಹಾದೇವಪ್ಪ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಲಾರಿ ಚಾಲಕ ಪರಾರಿಯಾಗಿದ್ದು, ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.