ರೇವಣ್ಣ ವಿರುದ್ಧ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ, ಹೊಳೆ ಹೊನ್ನೂರು, ಕುಂಸಿ, ದಾವಣಗೆರೆ ಜಿಲ್ಲೆಯ ಬಡಾವಣೆ ಠಾಣೆ, ದಾವಣಗೆರೆ ಗ್ರಾಮಾಂತರ, ಬಂದೂರು ಕ್ಯಾಂಪ್ ಠಾಣೆ, ವಿದ್ಯಾನಗರ, ನ್ಯಾಮತಿ ಠಾಣೆಗಳಲ್ಲಿ ಒಟ್ಟು 13 ಪ್ರಕರಣಗಳು ದಾಖಲಾಗಿದ್ದು, ಐದು ಪ್ರಕರಣಗಳಲ್ಲಿ ಸಜೆಯಾಗಿದೆ. ಒಂದು ಪ್ರಕರಣದಲ್ಲಿ ಖುಲಾಸೆಯಾಗಿದೆ. ಇವುಗಳಲ್ಲಿ 11 ಪ್ರಕರಣ ದೇವಸ್ಥಾನದಲ್ಲಿ ಕಳವು ನಡೆದ ಪ್ರಕರಣಗಳಾಗಿದ್ದರೆ ಒಂದು ಗ್ರಾಪಂ ಕಚೇರಿಯಲ್ಲಿ ಕಳ್ಳತನ, ಮತ್ತೊಂದು ಪ್ರಾಥಮಿಕ ಶಾಲೆಯಲ್ಲಿ ನಡೆದ ಕಳ್ಳತನದ ಪ್ರಕರಣ. ಪೂರ್ವಲಯ ಪೊಲೀಸ್ ಮಹಾನಿರೀಕ್ಷಕ ಡಾ.ನಂಜುಂಡಸ್ವಾಮಿ ಅವರು ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದರು.