ರಸ್ತೆ ಬದಿ ನಿಂತಿದ್ದ 3 ಲಾರಿ ಚಾಲಕರ ಮೇಲೆ ಹರಿದ ಟಿಪ್ಪರ್

ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಾಬಾವೊಂದರ ಬಳಿ ಲಾರಿ ನಿಲ್ಲಿಸಿ ರಸ್ತೆ ಬದಿಯಲ್ಲಿ ಮಾತನಾಡುತ್ತಾ ನಿಂತಿದ್ದ ಮೂವರು ಚಾಲಕರ ಮೇಲೆ ಟಿಪ್ಪರ್ ಲಾರಿ ಹರಿದು ಮೂವರು...
ಟಿಪ್ಪರ್ ಲಾರಿ
ಟಿಪ್ಪರ್ ಲಾರಿ
ಗದಗ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಾಬಾವೊಂದರ ಬಳಿ ಲಾರಿ ನಿಲ್ಲಿಸಿ ರಸ್ತೆ ಬದಿಯಲ್ಲಿ ಮಾತನಾಡುತ್ತಾ ನಿಂತಿದ್ದ ಮೂವರು ಚಾಲಕರ ಮೇಲೆ ಟಿಪ್ಪರ್ ಲಾರಿ ಹರಿದು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಂದು ಬೆಳಗ್ಗೆ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಗುಜರಾತ್‌ ಮೂಲದ ಕುಮಾರಸ್ವಾಮಿ(40) ಉತ್ತರಪ್ರದೇಶ  ಮೂಲದ ಕೇದಾರ್‌ ಯಾದವ್‌ (30) ಹಾಗೂ ನಿಜಾಮುದ್ದೀನ್‌(45) ಎಂದು ಗುರುತಿಸಲಾಗಿದೆ.
ಅಪಘಾತದ ಬಳಿಕ ಟಿಪ್ಪರ್ ಚಾಲಕ ಟಿಪ್ಪರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗದಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com