ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಹೊಸೆಟ್ಟಿ, ಪರೀಕ್ಷಾಂಗ ವಿಭಾಗದ ಸೂಪರಿಂಟೆಂಡೆಂಟ್ ಎಚ್.ಎಸ್. ವಿಜಯ್, ಇದೇ ವಿಭಾಗದ ಪ್ರಥಮ ದರ್ಜೆ ಸಹಾಯಕ ಸಿದ್ದಲಿಂಗ, ಸಲೀಂ ಅವರ ವಿರುದ್ಧ ದೂರು ದಾಖಲಾಗಿದೆ. ಇವರೆಲ್ಲರೂ ಒಟ್ಟಿಗೆ ಕಾರಿನಲ್ಲಿ ಹೋಗುವಾಗ ಲೋಕಾಭಿರಾಮವಾಗಿ ಮಾತನಾಡುತ್ತಾ, ಎಂ.ಎಂ. ಕಲಬುರ್ಗಿ ಅವರ ಹತ್ಯೆ ಮಾದರಿಯಲ್ಲಿಯೇ ಡಾ. ಮಲ್ಲಿಕಾ ಘಂಟಿ ಅವರ ಹತ್ಯೆ ನಡೆಸುವ ಬಗ್ಗೆ ಚರ್ಚಿಸಿದ್ದರು.